27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಜ.22: ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯೊಂದಿಗೆಕೋಟಿ ಕೋಟಿ ರಾಮ ಭಕ್ತರ ಅಭಿಲಾಷೆ ಈಡೇರುತ್ತಿದೆ

ಬೆಳ್ತಂಗಡಿ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಗೊಂಡು ಇದೀಗ ಭಕ್ತರ ಅಭಿಲಾಷೆಯಂತೆ ಜ.22ರಂದು ರಾಮಚಂದ್ರನ ಮೂರ್ತಿ ಪ್ರತಿಷ್ಠಾಪನೆಯಾಗುತ್ತಿದೆ. ಕೋಟಿ ಕೋಟಿ ರಾಮ ಭಕ್ತರ ಅಭಿಲಾಷೆ ಈಡೇರುತ್ತಿದೆ. ವಾದ – ವಿವಾದಗಳು ಏನೇ ಇರಲಿ ರಾಮ ಮಂದಿರ ನಿರ್ಮಾಣಗೊಂಡಿರುವುದು ಬಹುತೇಕರ ಕನಸು ನನಸಾಗಿದೆ. ಈ ನಿಟ್ಟಿನಲ್ಲಿ ಎಲ್ಲರಿಗೂ ಶುಭಾಶಯಗಳು.

ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ದಿನಗಳಿಂದ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಆದರೆ ಅದರಲ್ಲಿ ಒಂದು ವಿಚಾರಕ್ಕೆ ನನ್ನ ಸಹಮತ ಇಲ್ಲ. ರಾಮ ಮಾಂಸಹಾರಿಯಾಗಿದ್ದ ಎಂಬ ವಿಚಾರ. ಈ ವಿಚಾರ ಕೆಲವು ರಾಮಭಕ್ತರನ್ನು ಕೆರಳಿಸಿದೆ.

ಆದರೆ ನಾನು ತಿಳಿದುಕೊಂಡ ಪ್ರಕಾರ ರಾಮ ಶುದ್ಧ ಸಸ್ಯಾಹಾರಿಯಾಗಿದ್ದ. ರಾಮ ಎಂದರೆ ಆತ ಕೇವಲ ಮನುಷ್ಯನಲ್ಲ. ದೈವಾಂಶ ಸಂಭೂತ. ರಾಮಾಯಣವನ್ನು ಓದುವಾಗ ಆತ ಮಾಂಸಾಹಾರಿ ಎಂಬ ಉಲ್ಲೇಖ ಎಲ್ಲೂ ಬರುವುದಿಲ್ಲ. ರಾಮ ಮಾಂಸಾಹಾರಿಯಾಗಿರಲು ಸಾಧ್ಯವೇ ಇಲ್ಲ. ಹಣ್ಣು ಹಂಪಲುಗಳನ್ನು ತಿಂದು ಕಾಡಲ್ಲಿ ಜೀವನ ಕಳೆದ ಎಂಬ ಉಲ್ಲೇಖವೇ ಸಿಗುತ್ತದೆ.

ಹಾಗಾಗಿ ರಾಮ ಭಕ್ತರು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನಾ ಮಹೋತ್ಸವದ ಸಮಯದಲ್ಲಿಯಾದರೂ ಅಥವಾ ಮಹೋತ್ಸವದ ಸಮಯದವರೆಗಾದರೂ ಸಸ್ಯಾಹಾರಿಗಳಾಗಿ ನಿಯಮವನ್ನು ಅಳವಡಿಸಿಕೊಂಡು ರಾಮನ ಬಗ್ಗೆ ಇಲ್ಲದ ವಿಚಾರಗಳನ್ನು ಹೇಳುವವರಿಗೆ ಸೆಡ್ಡು ಹೊಡೆಯಿರಿ ಎಂದು ಮನವಿ ಮಾಡುತ್ತೇನೆ. ಹಾಗೆಯೇ ಮದ್ಯಪಾನ ಮುಂತಾದ ದುಶ್ಚಟಗಳಿಂದ ದೂರವಿದ್ದು ರಾಮ ಮಂದಿರದ ವೈಭವಕ್ಕೆ ಸಾಕ್ಷಿಯಾಗಿರಿ ಎಂದು ಮನವಿ ಮಾಡುತ್ತೇನೆ.

#ನಿರಂಜನ್ ಜೈನ್ ಕುದ್ಯಾಡಿ

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನುಡಿ ನಮನ

Suddi Udaya

ನಮ್ಮ ನಡೆ ಮತಗಟ್ಟೆ ಕಡೆ ಮತದಾರರ ಜಾಗೃತಿ ಆಂದೋಲನ

Suddi Udaya

ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಕಂಪೌಂಡ್ ಕುಸಿತ

Suddi Udaya

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya
error: Content is protected !!