28.1 C
ಪುತ್ತೂರು, ಬೆಳ್ತಂಗಡಿ
September 15, 2026
Uncategorized

ಜ.22: ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯೊಂದಿಗೆಕೋಟಿ ಕೋಟಿ ರಾಮ ಭಕ್ತರ ಅಭಿಲಾಷೆ ಈಡೇರುತ್ತಿದೆ

ಬೆಳ್ತಂಗಡಿ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಗೊಂಡು ಇದೀಗ ಭಕ್ತರ ಅಭಿಲಾಷೆಯಂತೆ ಜ.22ರಂದು ರಾಮಚಂದ್ರನ ಮೂರ್ತಿ ಪ್ರತಿಷ್ಠಾಪನೆಯಾಗುತ್ತಿದೆ. ಕೋಟಿ ಕೋಟಿ ರಾಮ ಭಕ್ತರ ಅಭಿಲಾಷೆ ಈಡೇರುತ್ತಿದೆ. ವಾದ – ವಿವಾದಗಳು ಏನೇ ಇರಲಿ ರಾಮ ಮಂದಿರ ನಿರ್ಮಾಣಗೊಂಡಿರುವುದು ಬಹುತೇಕರ ಕನಸು ನನಸಾಗಿದೆ. ಈ ನಿಟ್ಟಿನಲ್ಲಿ ಎಲ್ಲರಿಗೂ ಶುಭಾಶಯಗಳು.

ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ದಿನಗಳಿಂದ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಆದರೆ ಅದರಲ್ಲಿ ಒಂದು ವಿಚಾರಕ್ಕೆ ನನ್ನ ಸಹಮತ ಇಲ್ಲ. ರಾಮ ಮಾಂಸಹಾರಿಯಾಗಿದ್ದ ಎಂಬ ವಿಚಾರ. ಈ ವಿಚಾರ ಕೆಲವು ರಾಮಭಕ್ತರನ್ನು ಕೆರಳಿಸಿದೆ.

ಆದರೆ ನಾನು ತಿಳಿದುಕೊಂಡ ಪ್ರಕಾರ ರಾಮ ಶುದ್ಧ ಸಸ್ಯಾಹಾರಿಯಾಗಿದ್ದ. ರಾಮ ಎಂದರೆ ಆತ ಕೇವಲ ಮನುಷ್ಯನಲ್ಲ. ದೈವಾಂಶ ಸಂಭೂತ. ರಾಮಾಯಣವನ್ನು ಓದುವಾಗ ಆತ ಮಾಂಸಾಹಾರಿ ಎಂಬ ಉಲ್ಲೇಖ ಎಲ್ಲೂ ಬರುವುದಿಲ್ಲ. ರಾಮ ಮಾಂಸಾಹಾರಿಯಾಗಿರಲು ಸಾಧ್ಯವೇ ಇಲ್ಲ. ಹಣ್ಣು ಹಂಪಲುಗಳನ್ನು ತಿಂದು ಕಾಡಲ್ಲಿ ಜೀವನ ಕಳೆದ ಎಂಬ ಉಲ್ಲೇಖವೇ ಸಿಗುತ್ತದೆ.

ಹಾಗಾಗಿ ರಾಮ ಭಕ್ತರು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನಾ ಮಹೋತ್ಸವದ ಸಮಯದಲ್ಲಿಯಾದರೂ ಅಥವಾ ಮಹೋತ್ಸವದ ಸಮಯದವರೆಗಾದರೂ ಸಸ್ಯಾಹಾರಿಗಳಾಗಿ ನಿಯಮವನ್ನು ಅಳವಡಿಸಿಕೊಂಡು ರಾಮನ ಬಗ್ಗೆ ಇಲ್ಲದ ವಿಚಾರಗಳನ್ನು ಹೇಳುವವರಿಗೆ ಸೆಡ್ಡು ಹೊಡೆಯಿರಿ ಎಂದು ಮನವಿ ಮಾಡುತ್ತೇನೆ. ಹಾಗೆಯೇ ಮದ್ಯಪಾನ ಮುಂತಾದ ದುಶ್ಚಟಗಳಿಂದ ದೂರವಿದ್ದು ರಾಮ ಮಂದಿರದ ವೈಭವಕ್ಕೆ ಸಾಕ್ಷಿಯಾಗಿರಿ ಎಂದು ಮನವಿ ಮಾಡುತ್ತೇನೆ.

#ನಿರಂಜನ್ ಜೈನ್ ಕುದ್ಯಾಡಿ

Related posts

ಎಂಎಲ್ಸಿ ಪ್ರತಾಪಸಿಂಹ ನಾಯಕ್ ಶಿಫಾರಸ್ಸಿನನ್ವಯ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ. 1.22ಲಕ್ಷ ಮಂಜೂರು

Suddi Udaya

ಉಜಿರೆ: ವಿಲ್ಸನ್ ಸಂತೋಷ್ ರೊಡ್ರಿಗಸ್ ಹೃದಯಾಘಾತದಿಂದ ನಿಧನ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya

ಅಂಡೆತ್ತಡ್ಕ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸಮುದಾಯ ದತ್ತ ಶಾಲಾ ಕಾರ್ಯಕ್ರಮ

Suddi Udaya

ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿಯಿಂದ ಸಮಾಜ ಮುಖಿ ಕಾರ್ಯ: ಕರಂಬಾರು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಹಸ್ತಾಂತರ

Suddi Udaya

ಅರಸಿನಮಕ್ಕಿ ಸೇವಾ ಟ್ರಸ್ಟ್ ವತಿಯಿಂದ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶಕ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!