37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಜ.22: ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯೊಂದಿಗೆಕೋಟಿ ಕೋಟಿ ರಾಮ ಭಕ್ತರ ಅಭಿಲಾಷೆ ಈಡೇರುತ್ತಿದೆ

ಬೆಳ್ತಂಗಡಿ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಗೊಂಡು ಇದೀಗ ಭಕ್ತರ ಅಭಿಲಾಷೆಯಂತೆ ಜ.22ರಂದು ರಾಮಚಂದ್ರನ ಮೂರ್ತಿ ಪ್ರತಿಷ್ಠಾಪನೆಯಾಗುತ್ತಿದೆ. ಕೋಟಿ ಕೋಟಿ ರಾಮ ಭಕ್ತರ ಅಭಿಲಾಷೆ ಈಡೇರುತ್ತಿದೆ. ವಾದ – ವಿವಾದಗಳು ಏನೇ ಇರಲಿ ರಾಮ ಮಂದಿರ ನಿರ್ಮಾಣಗೊಂಡಿರುವುದು ಬಹುತೇಕರ ಕನಸು ನನಸಾಗಿದೆ. ಈ ನಿಟ್ಟಿನಲ್ಲಿ ಎಲ್ಲರಿಗೂ ಶುಭಾಶಯಗಳು.

ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ದಿನಗಳಿಂದ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಆದರೆ ಅದರಲ್ಲಿ ಒಂದು ವಿಚಾರಕ್ಕೆ ನನ್ನ ಸಹಮತ ಇಲ್ಲ. ರಾಮ ಮಾಂಸಹಾರಿಯಾಗಿದ್ದ ಎಂಬ ವಿಚಾರ. ಈ ವಿಚಾರ ಕೆಲವು ರಾಮಭಕ್ತರನ್ನು ಕೆರಳಿಸಿದೆ.

ಆದರೆ ನಾನು ತಿಳಿದುಕೊಂಡ ಪ್ರಕಾರ ರಾಮ ಶುದ್ಧ ಸಸ್ಯಾಹಾರಿಯಾಗಿದ್ದ. ರಾಮ ಎಂದರೆ ಆತ ಕೇವಲ ಮನುಷ್ಯನಲ್ಲ. ದೈವಾಂಶ ಸಂಭೂತ. ರಾಮಾಯಣವನ್ನು ಓದುವಾಗ ಆತ ಮಾಂಸಾಹಾರಿ ಎಂಬ ಉಲ್ಲೇಖ ಎಲ್ಲೂ ಬರುವುದಿಲ್ಲ. ರಾಮ ಮಾಂಸಾಹಾರಿಯಾಗಿರಲು ಸಾಧ್ಯವೇ ಇಲ್ಲ. ಹಣ್ಣು ಹಂಪಲುಗಳನ್ನು ತಿಂದು ಕಾಡಲ್ಲಿ ಜೀವನ ಕಳೆದ ಎಂಬ ಉಲ್ಲೇಖವೇ ಸಿಗುತ್ತದೆ.

ಹಾಗಾಗಿ ರಾಮ ಭಕ್ತರು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನಾ ಮಹೋತ್ಸವದ ಸಮಯದಲ್ಲಿಯಾದರೂ ಅಥವಾ ಮಹೋತ್ಸವದ ಸಮಯದವರೆಗಾದರೂ ಸಸ್ಯಾಹಾರಿಗಳಾಗಿ ನಿಯಮವನ್ನು ಅಳವಡಿಸಿಕೊಂಡು ರಾಮನ ಬಗ್ಗೆ ಇಲ್ಲದ ವಿಚಾರಗಳನ್ನು ಹೇಳುವವರಿಗೆ ಸೆಡ್ಡು ಹೊಡೆಯಿರಿ ಎಂದು ಮನವಿ ಮಾಡುತ್ತೇನೆ. ಹಾಗೆಯೇ ಮದ್ಯಪಾನ ಮುಂತಾದ ದುಶ್ಚಟಗಳಿಂದ ದೂರವಿದ್ದು ರಾಮ ಮಂದಿರದ ವೈಭವಕ್ಕೆ ಸಾಕ್ಷಿಯಾಗಿರಿ ಎಂದು ಮನವಿ ಮಾಡುತ್ತೇನೆ.

#ನಿರಂಜನ್ ಜೈನ್ ಕುದ್ಯಾಡಿ

Related posts

ಧರ್ಮಸ್ಥಳ: ಪಾಂಗಾಳ ಬಳಿ ರಸ್ತೆ ಅಪಘಾತ

Suddi Udaya

ಡಾ.ವೀಣಾ ಬನ್ನಂಜೆಯವರ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯ ಎರಡನೆಯ ದಿನ – ಶ್ರೀ ಕೃಷ್ಣನ ಬಾಲ್ಯದ ಘಟನೆಗಳ ಅನಾವರಣ : ಮೌನದಲ್ಲೇ ಮಂತ್ರ ಮುಗ್ಧರಾದ ಸಭಿಕರು

Suddi Udaya

ಕಾಜೂರು ಮಖಾಂ ಉರೂಸ್‌ಗೆ ಸಂಭ್ರಮದ ಚಾಲನೆ: ಆಧ್ಯಾತ್ಮಿಕ ಚೌಕಟ್ಟು ಮೀರಿ ಬದುಕುವವರಿಂದ ಸಮಾಜಕ್ಕೆ ಅಪಾಯ: ಕಾಜೂರು ತಂಙಳ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

Suddi Udaya

ಕನ್ಯಾಡಿ: ಬೈಕ್ – ಬಸ್ಸು ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya
error: Content is protected !!