29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ

ನಡ: ನಡ ಹಾಲು ಉತ್ಪಾದಕರ ಸಹಕಾರಿ ಸಂಘದ 13 ಮಂದಿ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳು 13 ಸ್ಥಾನಗಳಲ್ಲೂ ಗೆಲುವು ಸಾಧಿಸುವುದರೊಂದಿಗೆ ಜಯಭೇರಿ ಬಾರಿಸಿದ್ದಾರೆ. ಸಾಮಾನ್ಯ ಸ್ಥಾನದಿಂದ ಹಾಲಿ ಅಧ್ಯಕ್ಷ ಅಜಿತ್ ಆರಿಗ 183 ಮತ, ಕರುಣಾಕರ ಗೌಡ 184 ಮತ, ಚಂದ್ರಹಾಸ 182 ಮತ, ಪಿ. ಜನಾರ್ದನ ಗೌಡ 178 ಮತ, ನಾರಾಯಣ ಪೂಜಾರಿ 140 ಮತ, ಮಹಾಲಿಂಗ ಮೂಲ್ಯ 159 ಮತ, ಸ್ಟ್ಲಾನಿ ಪ್ರವೀಣ್ ಡಿ. ಸೋಜ 157 ಮತ, ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ರಾಜು ಮುಗೇರಾ 176 ಮತ, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಹೇಮಂತ ನಾಯ್ಕ 183 ಮತ, ಹಿಂದುಳಿದ ವರ್ಗ ಎ ಮೀಸಲು ಸ್ಥಾನದಿಂದ ದಯಾನಂದ ಸಾಲಿಯಾನ್ 185ಮತ, ಮಹಿಳಾ ಮೀಸಲು ಕ್ಷೇತ್ರದಿಂದ ಭಾರತಿ 196 ಮತ, ಹೇಮಾವತಿ 184ಮತ ಪಡೆದು ಜಯಭೇರಿ ಬಾರಿಸಿದ್ದಾರೆ.

ಹಿಂದುಳಿದ ವರ್ಗ ಬಿ. ಸ್ಥಾನದಿಂದ ಎನ್.ಬಿ ಹರಿಶ್ಚಂದ್ರ ಅವಿರೋಧವಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ ಬೆಂಬಲಿತರಾಗಿ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜೈಸನ್ ಜೀವನ್ ಡಿ ಸೋಜ 91, ಝಾಕೀರ್ ಹುಸೈನ್ 87 ಮತ, ತಿರುಮಲೇಶ್ವರ ಗೌಡ 83, ಫ್ರಾನ್ಸಿಸ್ ಡಿ ಸೋಜ 81, ಬಿ. ಮುನಿರಾಜ ಅಜ್ರಿ 102, ವಲೇರಿಯನ್ ವೇಗಸ್ 77, ವಿಕ್ಟರ್ ಡಿ ಸೋಜ 66, ಮಹಿಳಾ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದ ಗೀತಾಂಜಲಿ 101, ವಜನಾಕ್ಷಿ 83, ಹಿಂದುಳಿದ ವರ್ಗ ಎಯಿಂದ ಸ್ಪರ್ಧಿಸಿದ್ದ ಗುರುವಪ್ಪ ಪೂಜಾರಿ 97, ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಶರ್ಮಿಳಾ 104, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದ ವಿಮಲ ೧೦೫ ಮತಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ.

Related posts

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂಎನ್.ಎಸ್.ಎಸ್ ಸಹಯೋಗದಲ್ಲಿ ಸಂಚಾರಿ ನಿಯಮಗಳ ಮಾಹಿತಿ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!