23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು

ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ೨೦೨೨-೨೩ ನೇ ಸಾಲಿನಸಂಘದ ನೂತನ ಅಧ್ಯಕ್ಷರಾಗಿ ಸಂಘದ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಜಯವಿಕ್ರಮ್ ಕಲ್ಲಾಪು, ಉಪಾಧ್ಯಕ್ಷರಾಗಿ ಶಿಶು ಅಭಿವೃದ್ಧಿ ಯೋಜನೆ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಸುಂದರ ಪೂಜಾರಿ ಅವರು ಆಯ್ಕೆಯಾಗಿದ್ದಾರೆ.

ಜ.13ರಂದು ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಸಂಘದ ನೂತನ ನಿರ್ದೇಶಕರುಗಳಾಗಿ ವಿಶ್ವನಾಥ ಕೋಟ್ಯಾನ್ ಗುಂಡೂರಿ , ನಾರಾಯಣ ಪೂಜಾರಿ ಉಚ್ಚೂರು, ಪ್ರಶಾಂತ್ ಕೊಕ್ರಾಡಿ, ನಿತೀಶ್ ಎಚ್.,ಕುಕ್ಕೆಡಿ, ರವೀಂದ್ರ ಬಿ. ಅಮೀನ್ ಬಳಂಜ, ಸಂಜೀವ ಪೂಜಾರಿ ಕೊಡಂಗೆ, ಜಯ ಕುಮಾರ್ ನಡ, ಗುರುರಾಜ ಗುರಿಪಳ್ಳ, ಚಂದ್ರಶೇಖರ ಪೂಜಾರಿ ಇಂದಬೆಟ್ಟು, ನಮಿತಾ ತೋಟತ್ತಾಡಿ, ಸಂತೋಷ ಕೆ. ಸಿ., ಸುನೀಲ್ ಕನ್ಯಾಡಿ, ಸಂತೋಷ ಉಪ್ಪಾರು ಬೆಳಾಲು, ರೂಪೇಶ್ ಧರ್ಮಸ್ಥಳ, ವಿನೋದಿನಿ ರಾಮಪ್ಪ, ಪ್ರಮೋದ್ ಮಚ್ಚಿನ, ಅನೂಪ್ ಬಂಗೇರ, ಉಷಾ ಶರತ್, ಕರುಣಾಕರ ರೆಂಕೆದಗುತ್ತು, ನಾಮ ನಿರ್ದೇಶಕ ನಿರ್ದೇಶಕರುಗಳಾಗಿ ಗುಣಕರ ಅಗ್ನಾಡಿ, ಹರಿದಾಸ್ ಕೇದೆ, ಕಮಲಾಕ್ಷ ಬೆಳ್ತಂಗಡಿ, ತರುಷ್ ಹೇರಾಜೆ, ರಾಜಶ್ರೀ ರಮಣ್ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷ ಮಾಜಿ ಶಾಸಕ ಕೆ. ವಸಂತ ಬಂಗೇರ ಆಯ್ಕೆಯನ್ನು ಘೋಷಣೆ ಮಾಡಿದರು, ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಎಂ. ಕೆ. ಪ್ರಸಾದ್ ಶಿರ್ಲಾಲು, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆಯಾಗಿ ಸುಮತಿ ಪ್ರಮೋದ್, ಚುನಾವಣಾಧಿಕಾರಿಯಾಗಿ ಗುರುದೇವ ವಿವಿದೊದ್ದೇಶ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಣಾಧಿಕಾರಿ ಅಶ್ವಥ್ ಕುಮಾರ್ ಪ್ರಕ್ರಿಯೆ ನಡೆಸಿದರು. ಮಾಜಿ ಅಧ್ಯಕ್ಷರುಗಳು, ಮಾಜಿ ನಿರ್ದೇಶಕರುಗಳು, ಸದಸ್ಯರು ಹಾಜರಿದ್ದರು

Related posts

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

Suddi Udaya

ಅರಸಿನಮಕ್ಕಿ: 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಕನ್ಯಾಡಿ || : ಡಾ. ಡಿ.ವೀರೇಂದ್ರ ಹೆಗ್ಗಡೆ ಯವರಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!