28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು

ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ೨೦೨೨-೨೩ ನೇ ಸಾಲಿನಸಂಘದ ನೂತನ ಅಧ್ಯಕ್ಷರಾಗಿ ಸಂಘದ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಜಯವಿಕ್ರಮ್ ಕಲ್ಲಾಪು, ಉಪಾಧ್ಯಕ್ಷರಾಗಿ ಶಿಶು ಅಭಿವೃದ್ಧಿ ಯೋಜನೆ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಸುಂದರ ಪೂಜಾರಿ ಅವರು ಆಯ್ಕೆಯಾಗಿದ್ದಾರೆ.

ಜ.13ರಂದು ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಸಂಘದ ನೂತನ ನಿರ್ದೇಶಕರುಗಳಾಗಿ ವಿಶ್ವನಾಥ ಕೋಟ್ಯಾನ್ ಗುಂಡೂರಿ , ನಾರಾಯಣ ಪೂಜಾರಿ ಉಚ್ಚೂರು, ಪ್ರಶಾಂತ್ ಕೊಕ್ರಾಡಿ, ನಿತೀಶ್ ಎಚ್.,ಕುಕ್ಕೆಡಿ, ರವೀಂದ್ರ ಬಿ. ಅಮೀನ್ ಬಳಂಜ, ಸಂಜೀವ ಪೂಜಾರಿ ಕೊಡಂಗೆ, ಜಯ ಕುಮಾರ್ ನಡ, ಗುರುರಾಜ ಗುರಿಪಳ್ಳ, ಚಂದ್ರಶೇಖರ ಪೂಜಾರಿ ಇಂದಬೆಟ್ಟು, ನಮಿತಾ ತೋಟತ್ತಾಡಿ, ಸಂತೋಷ ಕೆ. ಸಿ., ಸುನೀಲ್ ಕನ್ಯಾಡಿ, ಸಂತೋಷ ಉಪ್ಪಾರು ಬೆಳಾಲು, ರೂಪೇಶ್ ಧರ್ಮಸ್ಥಳ, ವಿನೋದಿನಿ ರಾಮಪ್ಪ, ಪ್ರಮೋದ್ ಮಚ್ಚಿನ, ಅನೂಪ್ ಬಂಗೇರ, ಉಷಾ ಶರತ್, ಕರುಣಾಕರ ರೆಂಕೆದಗುತ್ತು, ನಾಮ ನಿರ್ದೇಶಕ ನಿರ್ದೇಶಕರುಗಳಾಗಿ ಗುಣಕರ ಅಗ್ನಾಡಿ, ಹರಿದಾಸ್ ಕೇದೆ, ಕಮಲಾಕ್ಷ ಬೆಳ್ತಂಗಡಿ, ತರುಷ್ ಹೇರಾಜೆ, ರಾಜಶ್ರೀ ರಮಣ್ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷ ಮಾಜಿ ಶಾಸಕ ಕೆ. ವಸಂತ ಬಂಗೇರ ಆಯ್ಕೆಯನ್ನು ಘೋಷಣೆ ಮಾಡಿದರು, ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಎಂ. ಕೆ. ಪ್ರಸಾದ್ ಶಿರ್ಲಾಲು, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆಯಾಗಿ ಸುಮತಿ ಪ್ರಮೋದ್, ಚುನಾವಣಾಧಿಕಾರಿಯಾಗಿ ಗುರುದೇವ ವಿವಿದೊದ್ದೇಶ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಣಾಧಿಕಾರಿ ಅಶ್ವಥ್ ಕುಮಾರ್ ಪ್ರಕ್ರಿಯೆ ನಡೆಸಿದರು. ಮಾಜಿ ಅಧ್ಯಕ್ಷರುಗಳು, ಮಾಜಿ ನಿರ್ದೇಶಕರುಗಳು, ಸದಸ್ಯರು ಹಾಜರಿದ್ದರು

Related posts

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಎಂ.ಎನ್.ಅನುಚೇತ್ ನೇಮಕ

Suddi Udaya

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

Suddi Udaya

ಯುಟ್ಯೂಬರ್ ಸಮೀರ್ ಎಂ.ಡಿಗೆ ಮಂಗಳೂರಿನ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮೂಡಿಗೆರೆ ತಾಲೂಕಿಗೆ ಎಳನೀರಿನ ಅಧಿತಿ ಪಿ ಜೈನ್ ಪ್ರಥಮ

Suddi Udaya

ಆ.17: ಮಡಂತ್ಯಾರು ಸಿಂಧೂರ ವೇದಿಕೆಯಲ್ಲಿ ಮೊಸರು ಕುಡಿಕೆ ಉತ್ಸವ ಸಂಭ್ರಮ

Suddi Udaya

ಗರ್ಡಾಡಿ ಯುವಕ ಮಂಡಲದ ಅಧ್ಯಕ್ಷರಾಗಿ ದಿನೇಶ್ ಬಂಗೇರ ಆಯ್ಕೆ

Suddi Udaya
error: Content is protected !!