April 2, 2025
Uncategorized

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಾಸಭೆ: ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ೨೦೨೨-೨೩ ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ ಇವರ ಅಧ್ಯಕ್ಷತೆಯಲ್ಲಿ ಜ.೧೩ರಂದು ಸಂಘದ ಸಭಾ ಭವನದಲ್ಲಿ ಜರಗಿತು. ಸಂಘದ ಪ್ರಧಾನ ಕಾರ್ಯದರ್ಶಿ ಜಯವಿಕ್ರಮ್ ಕಲ್ಲಾಪು ವರದಿ ವಾಚಿಸಿದರು, ಕೋಶಾಧಿಕಾರಿ ಅಭಿನಂದನ್ ಹರೀಶ್ ಕುಮಾರ್ ಜಮಾ ಖರ್ಚು ಮಂಡಿಸಿದರು. ಸಂಘದ ಗೌರವ ಅಧ್ಯಕ್ಷ ಮಾಜಿ ಶಾಸಕ ಕೆ. ವಸಂತ ಬಂಗೇರ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಿತೀಶ್ ಹೆಚ್., ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಜಿತಾ ವಿ. ಬಂಗೇರ, ಸಂಘದ ಉಪಾಧ್ಯಕ್ಷ ಶೇಖರ ಬಂಗೇರ, ಜತೆ ಕಾರ್ಯದರ್ಶಿ ರಾಜೀವ್ ಸಾಲಿಯಾನ್,ಪದಾಧಿಕಾರಿಗಳು, ನಿರ್ದೇಶಕರು, ಮಾಜಿ ಅಧ್ಯಕ್ಷರುಗಳುಗಳಾದ ವಸಂತ ಸಾಲಿಯಾನ್, ಪಿ. ಕೆ. ರಾಜು ಪೂಜಾರಿ,ಪೀತಾ೦ಬರ ಹೇರಾಜೆ, ಯೋಗೀಶ್ ಕುಮಾರ್, ಜಯರಾಮ ಬಂಗೇರ ಹೇರಾಜೆ, ಭಗೀರಥ ಜಿ., ಸೋಮನಾಥ ಬಂಗೇರ, ಮಾಜಿ ನಿರ್ದೇಶಕರುಗಳು, ಸದಸ್ಯರು ಹಾಜರಿದ್ದರು. ಸಭೆಯಲ್ಲಿ ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಗೌರವ ಅಧ್ಯಕ್ಷ ಕೆ. ವಸಂತ ಬಂಗೇರ ವಿತರಿಸಿದರು. ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ. 100

Suddi Udaya

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

Suddi Udaya

ಚಾರ್ಮಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ಬೆಳ್ತಂಗಡಿ :ರಿಕ್ಷಾ ಚಾಲಕ ನೀಲಯ್ಯ ಗೌಡ ನಿಧನ

Suddi Udaya

ಅಬ್ದುಲ್ ಲತೀಫ್ ಶಿರ್ಲಾಲ್ ನಿಧನ

Suddi Udaya
error: Content is protected !!