32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಾಸಭೆ: ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ೨೦೨೨-೨೩ ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ ಇವರ ಅಧ್ಯಕ್ಷತೆಯಲ್ಲಿ ಜ.೧೩ರಂದು ಸಂಘದ ಸಭಾ ಭವನದಲ್ಲಿ ಜರಗಿತು. ಸಂಘದ ಪ್ರಧಾನ ಕಾರ್ಯದರ್ಶಿ ಜಯವಿಕ್ರಮ್ ಕಲ್ಲಾಪು ವರದಿ ವಾಚಿಸಿದರು, ಕೋಶಾಧಿಕಾರಿ ಅಭಿನಂದನ್ ಹರೀಶ್ ಕುಮಾರ್ ಜಮಾ ಖರ್ಚು ಮಂಡಿಸಿದರು. ಸಂಘದ ಗೌರವ ಅಧ್ಯಕ್ಷ ಮಾಜಿ ಶಾಸಕ ಕೆ. ವಸಂತ ಬಂಗೇರ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಿತೀಶ್ ಹೆಚ್., ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಜಿತಾ ವಿ. ಬಂಗೇರ, ಸಂಘದ ಉಪಾಧ್ಯಕ್ಷ ಶೇಖರ ಬಂಗೇರ, ಜತೆ ಕಾರ್ಯದರ್ಶಿ ರಾಜೀವ್ ಸಾಲಿಯಾನ್,ಪದಾಧಿಕಾರಿಗಳು, ನಿರ್ದೇಶಕರು, ಮಾಜಿ ಅಧ್ಯಕ್ಷರುಗಳುಗಳಾದ ವಸಂತ ಸಾಲಿಯಾನ್, ಪಿ. ಕೆ. ರಾಜು ಪೂಜಾರಿ,ಪೀತಾ೦ಬರ ಹೇರಾಜೆ, ಯೋಗೀಶ್ ಕುಮಾರ್, ಜಯರಾಮ ಬಂಗೇರ ಹೇರಾಜೆ, ಭಗೀರಥ ಜಿ., ಸೋಮನಾಥ ಬಂಗೇರ, ಮಾಜಿ ನಿರ್ದೇಶಕರುಗಳು, ಸದಸ್ಯರು ಹಾಜರಿದ್ದರು. ಸಭೆಯಲ್ಲಿ ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಗೌರವ ಅಧ್ಯಕ್ಷ ಕೆ. ವಸಂತ ಬಂಗೇರ ವಿತರಿಸಿದರು. ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

Related posts

ಮದ್ದಡ್ಕ ಪರಿಸರದಲ್ಲಿ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ಕಿಡಿಗೇಡಿಗಳಿಂದ ತ್ಯಾಜ್ಯ ಕಸ ಎಸೆತ

Suddi Udaya

ಲಾಯಿಲ ಸೌಮ್ಯ ರವರ ಮನೆಯಲ್ಲಿ ನಾಗರ ಹಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಸೌಮ್ಯ ಲಾಯಿಲ

Suddi Udaya

ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಅಲೆಕ್ಕಿ ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ

Suddi Udaya

ಕಾಜೂರು ಮಖಾಂ ಉರೂಸ್‌ಗೆ ಸಂಭ್ರಮದ ಚಾಲನೆ: ಆಧ್ಯಾತ್ಮಿಕ ಚೌಕಟ್ಟು ಮೀರಿ ಬದುಕುವವರಿಂದ ಸಮಾಜಕ್ಕೆ ಅಪಾಯ: ಕಾಜೂರು ತಂಙಳ್

Suddi Udaya
error: Content is protected !!