July 23, 2026
Uncategorized

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಾಸಭೆ: ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ೨೦೨೨-೨೩ ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ ಇವರ ಅಧ್ಯಕ್ಷತೆಯಲ್ಲಿ ಜ.೧೩ರಂದು ಸಂಘದ ಸಭಾ ಭವನದಲ್ಲಿ ಜರಗಿತು. ಸಂಘದ ಪ್ರಧಾನ ಕಾರ್ಯದರ್ಶಿ ಜಯವಿಕ್ರಮ್ ಕಲ್ಲಾಪು ವರದಿ ವಾಚಿಸಿದರು, ಕೋಶಾಧಿಕಾರಿ ಅಭಿನಂದನ್ ಹರೀಶ್ ಕುಮಾರ್ ಜಮಾ ಖರ್ಚು ಮಂಡಿಸಿದರು. ಸಂಘದ ಗೌರವ ಅಧ್ಯಕ್ಷ ಮಾಜಿ ಶಾಸಕ ಕೆ. ವಸಂತ ಬಂಗೇರ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಿತೀಶ್ ಹೆಚ್., ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಜಿತಾ ವಿ. ಬಂಗೇರ, ಸಂಘದ ಉಪಾಧ್ಯಕ್ಷ ಶೇಖರ ಬಂಗೇರ, ಜತೆ ಕಾರ್ಯದರ್ಶಿ ರಾಜೀವ್ ಸಾಲಿಯಾನ್,ಪದಾಧಿಕಾರಿಗಳು, ನಿರ್ದೇಶಕರು, ಮಾಜಿ ಅಧ್ಯಕ್ಷರುಗಳುಗಳಾದ ವಸಂತ ಸಾಲಿಯಾನ್, ಪಿ. ಕೆ. ರಾಜು ಪೂಜಾರಿ,ಪೀತಾ೦ಬರ ಹೇರಾಜೆ, ಯೋಗೀಶ್ ಕುಮಾರ್, ಜಯರಾಮ ಬಂಗೇರ ಹೇರಾಜೆ, ಭಗೀರಥ ಜಿ., ಸೋಮನಾಥ ಬಂಗೇರ, ಮಾಜಿ ನಿರ್ದೇಶಕರುಗಳು, ಸದಸ್ಯರು ಹಾಜರಿದ್ದರು. ಸಭೆಯಲ್ಲಿ ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಗೌರವ ಅಧ್ಯಕ್ಷ ಕೆ. ವಸಂತ ಬಂಗೇರ ವಿತರಿಸಿದರು. ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

Related posts

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ (ನೋಂ.) , ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಪ್ರಥಮ ತಾಲೂಕು ಅಧಿವೇಶನ

Suddi Udaya

ಕೆಪಿಎಸ್ ಪುಂಜಾಲಕಟ್ಟೆ: ಆಟಿ ತಿಂಗೊಲ್ಡ್ ಜೋಕ್ಲೆ ಗೇನ

Suddi Udaya

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರವೀಣ್ ಬೇಂಗಿಲ ಆಯ್ಕೆ

Suddi Udaya

ರುಡ್ಸೆಟ್ ಸಂಸ್ಥೆ ಉಜಿರೆಯ2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿ ಬಿಡುಗಡೆಗೊಳಿಸಿದ ಡಾ.ಹೆಗ್ಗಡೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ

Suddi Udaya

ಮಾ.15ರಂದು ಸೌತಡ್ಕದಲ್ಲಿ, ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ

Suddi Udaya
error: Content is protected !!