25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಮಚ್ಚಿನ : ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟ ಮಚ್ಚಿನ ಇದರ ವಾರ್ಷಿಕ ಮಹಾಸಭೆಯು ಜ.13 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುಮತಿರವರ ಉಪಸ್ಥಿತಿಯಲ್ಲಿ ನಡೆಯಿತು.

ರೈತ ಸಂತೆ ಉದ್ಘಾಟಿಸುವುದರ ಮೂಲಕ ಆರಂಭಗೊಂಡ ಸಭೆಯು ಜಯಂತಿ ರವರ ಪ್ರಾರ್ಥನೆಯೊಂದಿಗೆ ಮುಂದುವರಿಯಿತು. ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಶ್ರೀಮತಿ ವಸಂತಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವರದಿಯನ್ನು ಒಕ್ಕೂಟದ ಸದಸ್ಯರಾಗಿರುವಂತಹ ಶ್ರೀಮತಿ ತಾರಾರವರು ಮಂಡಿಸಿದರು. ಜಮಾ ಖರ್ಚಿನ ವಿವರವನ್ನು ಕೃಷಿ ಉದ್ಯೋಗ ಸಖಿ ನೀತಾರವರು ಮಂಡಿಸಿದರು. ಒಕ್ಕೂಟದ ಆಡಿಟ್ ರಿಪೋರ್ಟನ್ನು ಬಿ.ಸಿ ಸಖಿ ಶ್ರೀಕಲಾ ರವರು ಮಂಡಿಸಿದರು.

ತಾಲೂಕು ವ್ಯವಸ್ಥಾಪಕರಾದ ನಿತೇಶ್ ಮತ್ತು ಕೃಷಿ ಇಲಾಖೆಯ ಸಿಬ್ಬಂದಿ ಜಯಂತ್ ಇವರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು. ನಿತೇಶ್ ಒಕ್ಕೂಟದ ಕಾರ್ಯವೈಖರಿಗಳು ಹೇಗೆ ನಡೆಯಬೇಕು ಎಂಬುದನ್ನು ಸವಿಸ್ತಾರವಾಗಿ ಸಭೆಯಲ್ಲಿ ತಿಳಿಸಿದರು. ಕೃಷಿ ಇಲಾಖೆಯ ಸಿಬ್ಬಂದಿಯಾಗಿರುವಂತ ಜಯಂತ್ ರವರು ಕೃಷಿ ಇಲಾಖೆಯಿಂದ ಇನ್ನು ಸಿಗುವಂತಹ ಸೌಲಭ್ಯಗಳನ್ನು ತಿಳಿಸಿದರು. ಒಕ್ಕೂಟದ ಮಾಜಿ ಅಧ್ಯಕ್ಷೆ ಶ್ರೀಮತಿ ಸುಮತಿ ಅವರ ಅನುಭವವನ್ನು ಹಂಚಿಕೊಂಡರು. ನಂತರ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ ರವರು ನಡೆಸಿಕೊಟ್ಟರು. ಮಾಜಿ ಪದಾಧಿಕಾರಿಗಳು ತಮ್ಮ ತಮ್ಮ ಅನಿಸಿಕೆಯನ್ನು ಸಭೆಯಲ್ಲಿ ಹಂಚಿಕೊಂಡರು.

ಎಲ್ ಸಿ ಆರ್ ಪಿ ಶ್ವೇತಾ ಸ್ವಾಗತಿಸಿದರು. ಕಾರ್ಯದರ್ಶಿ ಪುಷ್ಪಾ ಧನ್ಯವಾದವಿತ್ತರು.

Related posts

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡೆಕ್ಕಿಲಾಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ತೋಟತ್ತಾಡಿ: ಹಾಡು ಹಗಲೇ ಮನೆಯ ಬಾಗಿಲ ಬೀಗವನ್ನು ಮುರಿದು ಗಾದ್ರೇಜ್‌ನ ಲಾಕರ್ ನಲ್ಲಿಟ್ಟಿದ್ದ ರೂ. 1.30 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 4500 ಕೋಟಿ ರೂ. ಅನುದಾನ ಬಿಡುಗಡೆ ಮತ್ತು ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡುವ ಕುರಿತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಪ ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

Suddi Udaya
error: Content is protected !!