25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಮಚ್ಚಿನ : ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟ ಮಚ್ಚಿನ ಇದರ ವಾರ್ಷಿಕ ಮಹಾಸಭೆಯು ಜ.13 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುಮತಿರವರ ಉಪಸ್ಥಿತಿಯಲ್ಲಿ ನಡೆಯಿತು.

ರೈತ ಸಂತೆ ಉದ್ಘಾಟಿಸುವುದರ ಮೂಲಕ ಆರಂಭಗೊಂಡ ಸಭೆಯು ಜಯಂತಿ ರವರ ಪ್ರಾರ್ಥನೆಯೊಂದಿಗೆ ಮುಂದುವರಿಯಿತು. ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಶ್ರೀಮತಿ ವಸಂತಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವರದಿಯನ್ನು ಒಕ್ಕೂಟದ ಸದಸ್ಯರಾಗಿರುವಂತಹ ಶ್ರೀಮತಿ ತಾರಾರವರು ಮಂಡಿಸಿದರು. ಜಮಾ ಖರ್ಚಿನ ವಿವರವನ್ನು ಕೃಷಿ ಉದ್ಯೋಗ ಸಖಿ ನೀತಾರವರು ಮಂಡಿಸಿದರು. ಒಕ್ಕೂಟದ ಆಡಿಟ್ ರಿಪೋರ್ಟನ್ನು ಬಿ.ಸಿ ಸಖಿ ಶ್ರೀಕಲಾ ರವರು ಮಂಡಿಸಿದರು.

ತಾಲೂಕು ವ್ಯವಸ್ಥಾಪಕರಾದ ನಿತೇಶ್ ಮತ್ತು ಕೃಷಿ ಇಲಾಖೆಯ ಸಿಬ್ಬಂದಿ ಜಯಂತ್ ಇವರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು. ನಿತೇಶ್ ಒಕ್ಕೂಟದ ಕಾರ್ಯವೈಖರಿಗಳು ಹೇಗೆ ನಡೆಯಬೇಕು ಎಂಬುದನ್ನು ಸವಿಸ್ತಾರವಾಗಿ ಸಭೆಯಲ್ಲಿ ತಿಳಿಸಿದರು. ಕೃಷಿ ಇಲಾಖೆಯ ಸಿಬ್ಬಂದಿಯಾಗಿರುವಂತ ಜಯಂತ್ ರವರು ಕೃಷಿ ಇಲಾಖೆಯಿಂದ ಇನ್ನು ಸಿಗುವಂತಹ ಸೌಲಭ್ಯಗಳನ್ನು ತಿಳಿಸಿದರು. ಒಕ್ಕೂಟದ ಮಾಜಿ ಅಧ್ಯಕ್ಷೆ ಶ್ರೀಮತಿ ಸುಮತಿ ಅವರ ಅನುಭವವನ್ನು ಹಂಚಿಕೊಂಡರು. ನಂತರ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ ರವರು ನಡೆಸಿಕೊಟ್ಟರು. ಮಾಜಿ ಪದಾಧಿಕಾರಿಗಳು ತಮ್ಮ ತಮ್ಮ ಅನಿಸಿಕೆಯನ್ನು ಸಭೆಯಲ್ಲಿ ಹಂಚಿಕೊಂಡರು.

ಎಲ್ ಸಿ ಆರ್ ಪಿ ಶ್ವೇತಾ ಸ್ವಾಗತಿಸಿದರು. ಕಾರ್ಯದರ್ಶಿ ಪುಷ್ಪಾ ಧನ್ಯವಾದವಿತ್ತರು.

Related posts

ನಡ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆ

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಕರುಂ ಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!