September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಮಚ್ಚಿನ : ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟ ಮಚ್ಚಿನ ಇದರ ವಾರ್ಷಿಕ ಮಹಾಸಭೆಯು ಜ.13 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುಮತಿರವರ ಉಪಸ್ಥಿತಿಯಲ್ಲಿ ನಡೆಯಿತು.

ರೈತ ಸಂತೆ ಉದ್ಘಾಟಿಸುವುದರ ಮೂಲಕ ಆರಂಭಗೊಂಡ ಸಭೆಯು ಜಯಂತಿ ರವರ ಪ್ರಾರ್ಥನೆಯೊಂದಿಗೆ ಮುಂದುವರಿಯಿತು. ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಶ್ರೀಮತಿ ವಸಂತಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವರದಿಯನ್ನು ಒಕ್ಕೂಟದ ಸದಸ್ಯರಾಗಿರುವಂತಹ ಶ್ರೀಮತಿ ತಾರಾರವರು ಮಂಡಿಸಿದರು. ಜಮಾ ಖರ್ಚಿನ ವಿವರವನ್ನು ಕೃಷಿ ಉದ್ಯೋಗ ಸಖಿ ನೀತಾರವರು ಮಂಡಿಸಿದರು. ಒಕ್ಕೂಟದ ಆಡಿಟ್ ರಿಪೋರ್ಟನ್ನು ಬಿ.ಸಿ ಸಖಿ ಶ್ರೀಕಲಾ ರವರು ಮಂಡಿಸಿದರು.

ತಾಲೂಕು ವ್ಯವಸ್ಥಾಪಕರಾದ ನಿತೇಶ್ ಮತ್ತು ಕೃಷಿ ಇಲಾಖೆಯ ಸಿಬ್ಬಂದಿ ಜಯಂತ್ ಇವರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು. ನಿತೇಶ್ ಒಕ್ಕೂಟದ ಕಾರ್ಯವೈಖರಿಗಳು ಹೇಗೆ ನಡೆಯಬೇಕು ಎಂಬುದನ್ನು ಸವಿಸ್ತಾರವಾಗಿ ಸಭೆಯಲ್ಲಿ ತಿಳಿಸಿದರು. ಕೃಷಿ ಇಲಾಖೆಯ ಸಿಬ್ಬಂದಿಯಾಗಿರುವಂತ ಜಯಂತ್ ರವರು ಕೃಷಿ ಇಲಾಖೆಯಿಂದ ಇನ್ನು ಸಿಗುವಂತಹ ಸೌಲಭ್ಯಗಳನ್ನು ತಿಳಿಸಿದರು. ಒಕ್ಕೂಟದ ಮಾಜಿ ಅಧ್ಯಕ್ಷೆ ಶ್ರೀಮತಿ ಸುಮತಿ ಅವರ ಅನುಭವವನ್ನು ಹಂಚಿಕೊಂಡರು. ನಂತರ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ ರವರು ನಡೆಸಿಕೊಟ್ಟರು. ಮಾಜಿ ಪದಾಧಿಕಾರಿಗಳು ತಮ್ಮ ತಮ್ಮ ಅನಿಸಿಕೆಯನ್ನು ಸಭೆಯಲ್ಲಿ ಹಂಚಿಕೊಂಡರು.

ಎಲ್ ಸಿ ಆರ್ ಪಿ ಶ್ವೇತಾ ಸ್ವಾಗತಿಸಿದರು. ಕಾರ್ಯದರ್ಶಿ ಪುಷ್ಪಾ ಧನ್ಯವಾದವಿತ್ತರು.

Related posts

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

Suddi Udaya

ಮೇ 11 : ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

Suddi Udaya
error: Content is protected !!