22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಮಚ್ಚಿನ : ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟ ಮಚ್ಚಿನ ಇದರ ವಾರ್ಷಿಕ ಮಹಾಸಭೆಯು ಜ.13 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುಮತಿರವರ ಉಪಸ್ಥಿತಿಯಲ್ಲಿ ನಡೆಯಿತು.

ರೈತ ಸಂತೆ ಉದ್ಘಾಟಿಸುವುದರ ಮೂಲಕ ಆರಂಭಗೊಂಡ ಸಭೆಯು ಜಯಂತಿ ರವರ ಪ್ರಾರ್ಥನೆಯೊಂದಿಗೆ ಮುಂದುವರಿಯಿತು. ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಶ್ರೀಮತಿ ವಸಂತಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವರದಿಯನ್ನು ಒಕ್ಕೂಟದ ಸದಸ್ಯರಾಗಿರುವಂತಹ ಶ್ರೀಮತಿ ತಾರಾರವರು ಮಂಡಿಸಿದರು. ಜಮಾ ಖರ್ಚಿನ ವಿವರವನ್ನು ಕೃಷಿ ಉದ್ಯೋಗ ಸಖಿ ನೀತಾರವರು ಮಂಡಿಸಿದರು. ಒಕ್ಕೂಟದ ಆಡಿಟ್ ರಿಪೋರ್ಟನ್ನು ಬಿ.ಸಿ ಸಖಿ ಶ್ರೀಕಲಾ ರವರು ಮಂಡಿಸಿದರು.

ತಾಲೂಕು ವ್ಯವಸ್ಥಾಪಕರಾದ ನಿತೇಶ್ ಮತ್ತು ಕೃಷಿ ಇಲಾಖೆಯ ಸಿಬ್ಬಂದಿ ಜಯಂತ್ ಇವರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು. ನಿತೇಶ್ ಒಕ್ಕೂಟದ ಕಾರ್ಯವೈಖರಿಗಳು ಹೇಗೆ ನಡೆಯಬೇಕು ಎಂಬುದನ್ನು ಸವಿಸ್ತಾರವಾಗಿ ಸಭೆಯಲ್ಲಿ ತಿಳಿಸಿದರು. ಕೃಷಿ ಇಲಾಖೆಯ ಸಿಬ್ಬಂದಿಯಾಗಿರುವಂತ ಜಯಂತ್ ರವರು ಕೃಷಿ ಇಲಾಖೆಯಿಂದ ಇನ್ನು ಸಿಗುವಂತಹ ಸೌಲಭ್ಯಗಳನ್ನು ತಿಳಿಸಿದರು. ಒಕ್ಕೂಟದ ಮಾಜಿ ಅಧ್ಯಕ್ಷೆ ಶ್ರೀಮತಿ ಸುಮತಿ ಅವರ ಅನುಭವವನ್ನು ಹಂಚಿಕೊಂಡರು. ನಂತರ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ ರವರು ನಡೆಸಿಕೊಟ್ಟರು. ಮಾಜಿ ಪದಾಧಿಕಾರಿಗಳು ತಮ್ಮ ತಮ್ಮ ಅನಿಸಿಕೆಯನ್ನು ಸಭೆಯಲ್ಲಿ ಹಂಚಿಕೊಂಡರು.

ಎಲ್ ಸಿ ಆರ್ ಪಿ ಶ್ವೇತಾ ಸ್ವಾಗತಿಸಿದರು. ಕಾರ್ಯದರ್ಶಿ ಪುಷ್ಪಾ ಧನ್ಯವಾದವಿತ್ತರು.

Related posts

ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಸಭೆ: ಅಡಕೆ ನಿಷೇಧದ ಆತಂಕ ನಿವಾರಣೆಗೆ ಪ್ರಯತ್ನ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಶ್ರೀ ಪ್ರಶಸ್ತಿ

Suddi Udaya

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗೆ ಅವಮಾನ, ಸಂವಿಧಾನದ ಮೇಲಿನ ದಾಳಿ: ಸಂತೋಷ್ ಕುಮಾರ್ ಲಾಯಿಲ ಖಂಡನೆ

Suddi Udaya

ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ “ಯುರೇಕಾ 2025”- ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಏ.7 ರಿಂದ 12 ರ ವರೆಗೆ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya

ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ರೋಗಿಗಳ ಸೇವೆಗೆ ಲಭಿಸುತ್ತಿಲ್ಲ : ಪಟ್ಟಣ ಪಂಚಾಯತ್ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರ ಆಕ್ರೋಶ

Suddi Udaya

ಗಾಯಕಿ ನಂದಶ್ರೀ ಸಂಗೀತ ಪರೀಕ್ಷೆಯಲ್ಲಿ ಅದ್ಭುತ ಸಾಧನೆ

Suddi Udaya
error: Content is protected !!