26.9 C
ಪುತ್ತೂರು, ಬೆಳ್ತಂಗಡಿ
April 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಮಚ್ಚಿನ : ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟ ಮಚ್ಚಿನ ಇದರ ವಾರ್ಷಿಕ ಮಹಾಸಭೆಯು ಜ.13 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುಮತಿರವರ ಉಪಸ್ಥಿತಿಯಲ್ಲಿ ನಡೆಯಿತು.

ರೈತ ಸಂತೆ ಉದ್ಘಾಟಿಸುವುದರ ಮೂಲಕ ಆರಂಭಗೊಂಡ ಸಭೆಯು ಜಯಂತಿ ರವರ ಪ್ರಾರ್ಥನೆಯೊಂದಿಗೆ ಮುಂದುವರಿಯಿತು. ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಶ್ರೀಮತಿ ವಸಂತಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವರದಿಯನ್ನು ಒಕ್ಕೂಟದ ಸದಸ್ಯರಾಗಿರುವಂತಹ ಶ್ರೀಮತಿ ತಾರಾರವರು ಮಂಡಿಸಿದರು. ಜಮಾ ಖರ್ಚಿನ ವಿವರವನ್ನು ಕೃಷಿ ಉದ್ಯೋಗ ಸಖಿ ನೀತಾರವರು ಮಂಡಿಸಿದರು. ಒಕ್ಕೂಟದ ಆಡಿಟ್ ರಿಪೋರ್ಟನ್ನು ಬಿ.ಸಿ ಸಖಿ ಶ್ರೀಕಲಾ ರವರು ಮಂಡಿಸಿದರು.

ತಾಲೂಕು ವ್ಯವಸ್ಥಾಪಕರಾದ ನಿತೇಶ್ ಮತ್ತು ಕೃಷಿ ಇಲಾಖೆಯ ಸಿಬ್ಬಂದಿ ಜಯಂತ್ ಇವರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು. ನಿತೇಶ್ ಒಕ್ಕೂಟದ ಕಾರ್ಯವೈಖರಿಗಳು ಹೇಗೆ ನಡೆಯಬೇಕು ಎಂಬುದನ್ನು ಸವಿಸ್ತಾರವಾಗಿ ಸಭೆಯಲ್ಲಿ ತಿಳಿಸಿದರು. ಕೃಷಿ ಇಲಾಖೆಯ ಸಿಬ್ಬಂದಿಯಾಗಿರುವಂತ ಜಯಂತ್ ರವರು ಕೃಷಿ ಇಲಾಖೆಯಿಂದ ಇನ್ನು ಸಿಗುವಂತಹ ಸೌಲಭ್ಯಗಳನ್ನು ತಿಳಿಸಿದರು. ಒಕ್ಕೂಟದ ಮಾಜಿ ಅಧ್ಯಕ್ಷೆ ಶ್ರೀಮತಿ ಸುಮತಿ ಅವರ ಅನುಭವವನ್ನು ಹಂಚಿಕೊಂಡರು. ನಂತರ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ ರವರು ನಡೆಸಿಕೊಟ್ಟರು. ಮಾಜಿ ಪದಾಧಿಕಾರಿಗಳು ತಮ್ಮ ತಮ್ಮ ಅನಿಸಿಕೆಯನ್ನು ಸಭೆಯಲ್ಲಿ ಹಂಚಿಕೊಂಡರು.

ಎಲ್ ಸಿ ಆರ್ ಪಿ ಶ್ವೇತಾ ಸ್ವಾಗತಿಸಿದರು. ಕಾರ್ಯದರ್ಶಿ ಪುಷ್ಪಾ ಧನ್ಯವಾದವಿತ್ತರು.

Related posts

ಜೂ.12 ರಂದು ವಿದ್ಯುತ್ ನಿಲುಗಡೆ

Suddi Udaya

ಕೊಕ್ಕಡದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಶಾಸಕ ಹರೀಶ್ ಪೂಂಜ ಇವರಿಗೆ ಮನವಿ

Suddi Udaya

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya
error: Content is protected !!