April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

ಸಾಂದರ್ಬಿಕ ಚಿತ್ರ

ಬೆಳ್ತಂಗಡಿ: ಬೆಂಗಳೂರು ಮೂಲದ ಸೆಮಿಕಂಡಕ್ಟರ್ ಮತ್ತು ಎಂಬೆಡೆಡ್ ಸಿಸ್ಟಮ್ಸ್ ಡಿಸೈನ್ ಕಂಪನಿ ಆಗಿರುವ InSemi ಅನ್ನು 280 ಕೋಟಿ ರೂ.ಗೆ ಸ್ವಾಧೀನಪಡಿಸಿಕೊಳ್ಳಲು ಟೆಕ್ ದೈತ್ಯ ಇನ್ಫೋಸಿಸ್ ಒಪ್ಪಿಕೊಂಡಿದೆ.

ಇನ್ ಸೆಮಿ ಟೆಕ್ನಾಲಜೀಸ್ ಸಂಸ್ಥೆಯನ್ನು ಬೆಳ್ತಂಗಡಿ ಮೂಲದ ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶ್ರೀಕೃಷ್ಣ ಸಂಪಿಗೆತ್ತಾಯರವರ ಪುತ್ರ ಶ್ರೀಕಾಂತ್ ಸಂಪಿಗೆತ್ತಾಯ 2013 ರಲ್ಲಿ ಸ್ಥಾಪಿಸಿದ್ದರು.

2013 ರಲ್ಲಿ ಸ್ಥಾಪಿಸಲಾದ InSemi 900 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದ್ದು, ಎಲೆಕ್ಟ್ರಾನಿಕ್ ವಿನ್ಯಾಸ, ಪ್ಲಾಟ್‌ಫಾರ್ಮ್ ವಿನ್ಯಾಸ, ಆಟೊಮೇಷನ್, ಎಂಬೆಡೆಡ್ ಮತ್ತು ಸಾಫ್ಟ್‌ವೇರ್ ತಂತ್ರಜ್ಞಾನಗಳ ಪರಿಣತಿಯೊಂದಿಗೆ ಎಂಡ್-ಟು-ಎಂಡ್ ಸೆಮಿಕಂಡಕ್ಟರ್ ವಿನ್ಯಾಸ ಸೇವೆಗಳನ್ನು ನೀಡುತ್ತದೆ. ಇದು ಸೆಮಿ-ಕಂಡಕ್ಟರ್, ಗ್ರಾಹಕ ಎಲೆಕ್ಟ್ರಾನಿಕ್ಸ್, ಆಟೋಮೋಟಿವ್ ಮತ್ತು ಹೈಟೆಕ್ ಉದ್ಯಮಗಳಾದ್ಯಂತ ಹಲವಾರು ಪ್ರಮುಖ ಜಾಗತಿಕ ನಿಗಮಗಳಿಗೆ ಸೇವೆ ಸಲ್ಲಿಸುತ್ತದೆ.
ಕಳೆದ ವರ್ಷ ಮಾರ್ಚ್‌ಗೆ ಕೊನೆಗೊಂಡ ವರ್ಷದಲ್ಲಿ ಕಂಪನಿಯು 154 ಕೋಟಿ ಆದಾಯವನ್ನು ಹೊಂದಿತ್ತು. ಇದರ ಸ್ವಾಧೀನವು ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಗೆ ನಮ್ಮ ಬದ್ಧತೆಯನ್ನು ಪ್ರದರ್ಶಿಸುತ್ತದೆ ಮತ್ತು ಎಂಜಿನಿಯರಿಂಗ್ ನಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಸೇವೆಗಳಲ್ಲಿ ಪರಿಣತಿಯನ್ನು ಬಲಪಡಿಸುತ್ತದೆ” ಎಂದು ಇನ್ಫೋಸಿಸ್ ಹೇಳಿದೆ.

ಇನ್ಫೋಸಿಸ್ ಪ್ರಕಾರ, ಸ್ವಾಧೀನ ಪ್ರಕ್ರಿಯೆಯು 2024 ಆರ್ಥಿಕ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಇನ್ಫೋಸಿಸ್ ನೊಂದಿಗೆ ಸ್ವಾಧೀನದೊಂದಿಗೆ ಸಹಯೋಗ ದೊಡ್ಡ ಪ್ರಮಾಣದಲ್ಲಿ ಸೃಷ್ಟಿಯಾಗಲಿದೆ. AI, ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಶಕ್ತಿ ಬರಲಿದೆ. ಮುಂದಿನ ಪೀಳಿಗೆಯ ತಂತ್ರಜ್ಞಾನದ ಶಕ್ತಿಯನ್ನು ಜಾಗತಿಕ ಗ್ರಾಹಕರು ಮತ್ತು ಉದ್ಯಮ ವಲಯಗಳಲ್ಲಿ ವಿಸ್ತರಿಸಲು ಅನುವು ಮಾಡಿಕೊಡುತ್ತದೆ ಎಂದು InSemi ಸಹ ಸಂಸ್ಥಾಪಕರಾದ ಶ್ರೀಕಾಂತ್ ಸಂಪಿಗೆತ್ತಾಯ ಮತ್ತು ಅರೂಪ್ ತಿಳಿಸಿದರು.

Related posts

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ಮಾ.26-28: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ಅಂಡಿಂಜೆ: ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ ನಿಧನ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

Suddi Udaya
error: Content is protected !!