July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

ಸಾಂದರ್ಬಿಕ ಚಿತ್ರ

ಬೆಳ್ತಂಗಡಿ: ಬೆಂಗಳೂರು ಮೂಲದ ಸೆಮಿಕಂಡಕ್ಟರ್ ಮತ್ತು ಎಂಬೆಡೆಡ್ ಸಿಸ್ಟಮ್ಸ್ ಡಿಸೈನ್ ಕಂಪನಿ ಆಗಿರುವ InSemi ಅನ್ನು 280 ಕೋಟಿ ರೂ.ಗೆ ಸ್ವಾಧೀನಪಡಿಸಿಕೊಳ್ಳಲು ಟೆಕ್ ದೈತ್ಯ ಇನ್ಫೋಸಿಸ್ ಒಪ್ಪಿಕೊಂಡಿದೆ.

ಇನ್ ಸೆಮಿ ಟೆಕ್ನಾಲಜೀಸ್ ಸಂಸ್ಥೆಯನ್ನು ಬೆಳ್ತಂಗಡಿ ಮೂಲದ ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶ್ರೀಕೃಷ್ಣ ಸಂಪಿಗೆತ್ತಾಯರವರ ಪುತ್ರ ಶ್ರೀಕಾಂತ್ ಸಂಪಿಗೆತ್ತಾಯ 2013 ರಲ್ಲಿ ಸ್ಥಾಪಿಸಿದ್ದರು.

2013 ರಲ್ಲಿ ಸ್ಥಾಪಿಸಲಾದ InSemi 900 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದ್ದು, ಎಲೆಕ್ಟ್ರಾನಿಕ್ ವಿನ್ಯಾಸ, ಪ್ಲಾಟ್‌ಫಾರ್ಮ್ ವಿನ್ಯಾಸ, ಆಟೊಮೇಷನ್, ಎಂಬೆಡೆಡ್ ಮತ್ತು ಸಾಫ್ಟ್‌ವೇರ್ ತಂತ್ರಜ್ಞಾನಗಳ ಪರಿಣತಿಯೊಂದಿಗೆ ಎಂಡ್-ಟು-ಎಂಡ್ ಸೆಮಿಕಂಡಕ್ಟರ್ ವಿನ್ಯಾಸ ಸೇವೆಗಳನ್ನು ನೀಡುತ್ತದೆ. ಇದು ಸೆಮಿ-ಕಂಡಕ್ಟರ್, ಗ್ರಾಹಕ ಎಲೆಕ್ಟ್ರಾನಿಕ್ಸ್, ಆಟೋಮೋಟಿವ್ ಮತ್ತು ಹೈಟೆಕ್ ಉದ್ಯಮಗಳಾದ್ಯಂತ ಹಲವಾರು ಪ್ರಮುಖ ಜಾಗತಿಕ ನಿಗಮಗಳಿಗೆ ಸೇವೆ ಸಲ್ಲಿಸುತ್ತದೆ.
ಕಳೆದ ವರ್ಷ ಮಾರ್ಚ್‌ಗೆ ಕೊನೆಗೊಂಡ ವರ್ಷದಲ್ಲಿ ಕಂಪನಿಯು 154 ಕೋಟಿ ಆದಾಯವನ್ನು ಹೊಂದಿತ್ತು. ಇದರ ಸ್ವಾಧೀನವು ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಗೆ ನಮ್ಮ ಬದ್ಧತೆಯನ್ನು ಪ್ರದರ್ಶಿಸುತ್ತದೆ ಮತ್ತು ಎಂಜಿನಿಯರಿಂಗ್ ನಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಸೇವೆಗಳಲ್ಲಿ ಪರಿಣತಿಯನ್ನು ಬಲಪಡಿಸುತ್ತದೆ” ಎಂದು ಇನ್ಫೋಸಿಸ್ ಹೇಳಿದೆ.

ಇನ್ಫೋಸಿಸ್ ಪ್ರಕಾರ, ಸ್ವಾಧೀನ ಪ್ರಕ್ರಿಯೆಯು 2024 ಆರ್ಥಿಕ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಇನ್ಫೋಸಿಸ್ ನೊಂದಿಗೆ ಸ್ವಾಧೀನದೊಂದಿಗೆ ಸಹಯೋಗ ದೊಡ್ಡ ಪ್ರಮಾಣದಲ್ಲಿ ಸೃಷ್ಟಿಯಾಗಲಿದೆ. AI, ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಶಕ್ತಿ ಬರಲಿದೆ. ಮುಂದಿನ ಪೀಳಿಗೆಯ ತಂತ್ರಜ್ಞಾನದ ಶಕ್ತಿಯನ್ನು ಜಾಗತಿಕ ಗ್ರಾಹಕರು ಮತ್ತು ಉದ್ಯಮ ವಲಯಗಳಲ್ಲಿ ವಿಸ್ತರಿಸಲು ಅನುವು ಮಾಡಿಕೊಡುತ್ತದೆ ಎಂದು InSemi ಸಹ ಸಂಸ್ಥಾಪಕರಾದ ಶ್ರೀಕಾಂತ್ ಸಂಪಿಗೆತ್ತಾಯ ಮತ್ತು ಅರೂಪ್ ತಿಳಿಸಿದರು.

Related posts

ಕುಪೆಟ್ಟಿ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೊಳಿಸುವಂತೆ ಬಿಜೆಪಿ ಪ್ರತಿಭಟನೆ

Suddi Udaya

ರಾಷ್ಟ್ರೀಯ ಹೆದ್ದಾರಿ ಅರಳಿ ಪ್ರದೇಶಕ್ಕೆ ಅನುಕೂಲವಾಗುವಂತೆ ರಸ್ತೆ ನಿರ್ಮಿಸಲು ಆಗ್ರಹ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಮರೋಡಿ ಶ್ರೀ ಬ್ರಹ್ಮಲಿಂಗೇಶ್ವರ ತಂಡವು ಪ್ರಥಮ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಬೆಳೆ ಸಮೀಕ್ಷೆ ಮಾಹಿತಿ ಕಾರ್ಯಾಗಾರ

Suddi Udaya

ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿ: ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ

Suddi Udaya

ಲಾಯಿಲ: ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya
error: Content is protected !!