23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೃತಜ್ಞತಾ ಸಮಾರಂಭ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ವತಿಯಿಂದ ವಾಣಿ ಕಾಲೇಜಿನಲ್ಲಿ 18ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕೃತಜ್ಞತಾ ಸಭೆ ಮತ್ತು ಡಾ. ಅಮೃತ ಸೋಮೇಶ್ವರರವರಿಗೆ ನುಡಿ ನಮನ ಕಾರ್ಯಕ್ರಮ ಜರಗಿತು.


ಸಭೆಯ ಆರಂಭಕ್ಕೆ ಮೌನ ಪ್ರಾರ್ಥನೆ ನಡೆಸಿ ಡಾ. ಅಮೃತ ಸೋಮೇಶ್ವರರ ಭಾವಚಿತ್ರಕ್ಕೆ ಪುಷ್ಪ ನಮನ ಸಮರ್ಪಣೆಯೊಂದಿಗೆ ಡಾ. ಅಮೃತರ ಬಗ್ಗೆ ಉಜಿರೆ ಶ್ರೀಧ ಮ ಕಾಲೇಜಿನ ಉಪನ್ಯಾಸಕರಾದ ಡಾ. ದಿವ ಕೊಕ್ಕಡರವರು ಮಾತನಾಡುತ್ತಾ, ಅಮೃತರು ಸದ್ದು ಮಾಡುವ ಸ್ವಭಾವದವರಲ್ಲ. ಪ್ರಶಸ್ತಿ ಗೌರವಗಳನ್ನು ಅರಸಿದವರೂ ಅಲ್ಲ. ಆದರೆ ಕೀರ್ತಿ ಪ್ರಶಸ್ತಿಗಳು ಅವರನ್ನು ಅರಸಿಕೊಂಡು ಬಂದಿವೆ. ಅವರ ವಿಚಾರಗಳು, ಬರಹಗಳು ವಿಶ್ವ ಮಾದರಿ. ಅವರು ನಂಬಿದ, ಬೆಳೆಸಿದ ಜೀವನ ಮೌಲ್ಯಗಳು ಎಂದೂ ಮೃತವಾಗದ ಅಮೃತ ವಚನಗಳಾಗಿವೆ ಎಂದು ಹೇಳಿದರು.

ನಂತರ ಸಾಹಿತ್ಯ ಸಮ್ಮೇಳನದ ಬಗ್ಗೆ ಧರಣೇಂದ್ರ ಕೆ ಜೈನ್, ಸಂಯೋಜನ ಸಮಿತಿಯ ಅಧ್ಯಕ್ಷರಾದ ಜಯಾನಂದ ಗೌಡರವರು ಅನಿಸಿಕೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪೂರ್ಣಕಾಲಿಕವಾಗಿ ಮುದ್ರಣಗೊಂಡ ಚಾರುಮುಡಿ ನೆನಪಿನ ಸಂಚಿಕೆಯನ್ನು ಸಮ್ಮೇಳನದ ಸರ್ವಾಧ್ಯಕ್ಷರಾದ ಎ. ಕೃಷ್ಣಪ್ಪ ಪೂಜಾರಿಯವರು ಬಿಡುಗಡೆಗೊಳಿಸಿ, ದೈವಾನುಗ್ರಹ ಮತ್ತು ಸಂಕಲ್ಪ ಶುದ್ಧಿ ಇದ್ದರೆ ಜೀವನದಲ್ಲಿ ಯಶಸ್ಸು ತಾನಾಗಿಯೆ ಒದಗಿಬರುತ್ತದೆ. ಅದಕ್ಕೆ ಬೆಳ್ತಂಗಡಿ ತಾಲೂಕಿನ 18ನೆಯ ಕನ್ನಡ ಸಾಹಿತ್ಯ ಸಮ್ಮೇಳನವೆ ಸಾಕ್ಷಿ ಎಂದು ಅಭಿಪ್ರಾಯ ಪಟ್ಟು, ಸಮ್ಮೇಳನದ ಯಶಸ್ಸಿನಲ್ಲಿ ಭಾಗಿಗಳಾದ ಸರ್ವರನ್ನೂ ಅಭಿನಂದಿಸಿ ಮಾತನಾಡಿದರು.


ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ ಯದುಪತಿ ಗೌಡರು ಸಮ್ಮೇಳನದ ಅರ್ಥಪೂರ್ಣ ಆಯೋಜನೆಯಲ್ಲಿ ಭಾಗಿಗಳಾದ ಎಲ್ಲರಿಗೂ ಪರಿಷತ್ತಿನ ವತಿಯಿಂದ ಕೃತಜ್ಞತೆ ಸಲ್ಲಿಸಿದರು. ವೇದಿಕೆಯಲ್ಲಿ ಉಪನ್ಯಾಸಕರಾದ ಸಂಪತ್ ಬಿ ಸುವರ್ಣ ಬೆಳ್ತಂಗಡಿ, ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಪ್ರಮೀಳಾರವರು ಉಪಸ್ಥಿತರಿದ್ದರು.

ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ರಾಮಕೃಷ್ಣ ಭಟ್ ಬೆಳಾಲು ಸ್ವಾಗತಿಸಿದರು, ಸಂಯೋಜನ ಸಮಿತಿಯ ಪ್ರಧಾನ ಕಾರ್ಯದರ್ಶಿ ಮೋಹನ್ ಗೌಡರವರು ವಂದಿಸಿದರು. ಸಮ್ಮೇಳನದ ಕೋಶಾಧ್ಯಕ್ಷರು ಸಮ್ಮೇಳನದ ಲೆಕ್ಕ ಪತ್ರ ಮಂಡಿಸಿದರು. ಉಪನ್ಯಾಸಕರಾದ ಬೆಳ್ಳಿಯಪ್ಪ ರವರು ಕಾರ್ಯಕ್ರಮ ನಿರೂಪಿಸಿದರು.

Related posts

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ

Suddi Udaya

ತೋಟತ್ತಾಡಿ ಗ್ರಾಮ ಸಮಿತಿ ಹಾಗೂ ಬೂತ್ ಸಮಿತಿಗಳ ವತಿಯಿಂದ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡರಿಗೆ ಸನ್ಮಾನ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಎಸ್‌ಜಿಎಫ್‌ಐ ರಾಷ್ಟ್ರೀಯ ಕಬಡ್ಡಿ ಪಂದ್ಯಾಟ: ರಾಜ್ಯ ಪ್ರತಿನಿಧಿಸಲಿರುವ ಉಜಿರೆಯ ಎಸ್.ಡಿ.ಎಂ ತಂಡ

Suddi Udaya

ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.189 ಕೋಟಿ ವಾರ್ಷಿಕ ವ್ಯವಹಾರ,ರೂ.23 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ಮಡಂತ್ಯಾರು: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!