25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

ಚಾರ್ಮಾಡಿ ಘಾಟಿಯ ವ್ಯೂ ಪಾಯಿಂಟ್ ನಲ್ಲಿ ಟಿಪ್ಪರ್ ಲಾರಿ 1000 ಅಡಿ ಕ್ಕಿಂತಾ ಹೆಚ್ಚು ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾದ ಘಟನೆ ಜ.12 ರಂದು ಮಧ್ಯರಾತ್ರಿ ನಡೆದಿದೆ.

ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ಟಿಪ್ಪರ್ ಮಂಜು ಕವಿದ ವಾತಾವರಣವಿದ್ದರಿಂದ ದಾರಿ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಉರುಳಿ ಬಿದ್ದಿದೆ ಉರುಳಿ ಬಿದ್ದ ರಭಸಕ್ಕೆ ಟಿಪ್ಪರ್ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ ಚಾಲಕನಿಗೆ ಸೊಂಟಕ್ಕೆ ತುಂಬಾ ಪೆಟ್ಟಾಗಿದ್ದು ಅಂಬುಲೆನ್ಸ್ ಮೂಲಕ ಉಜಿರೆಯ ಧರ್ಮಸ್ಥಳ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸ್ ಅಭಿಷೇಕ್, ಅರಣ್ಯ ಇಲಾಖೆ ಬೀಟ್ ಫಾರೆಸ್ಟ್ ಅಭಿಜಿತ್ , ಸಮಾಜ ಸೇವಕ ಆರಿಫ್ ಹಾಗೂ ಕುಂಜಿಮೊಣು ಕಾರ್ಯಚರಣೆಯಲ್ಲಿ ಇದ್ದರು.

Related posts

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

Suddi Udaya

ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

Suddi Udaya

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya

ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಳೀಯ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಣೆ

Suddi Udaya
error: Content is protected !!