25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

ಬೆಳ್ತಂಗಡಿ: 8 ವರ್ಷದ ಹಿಂದೆ ಸಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆಯಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಈ ಬಗ್ಗೆ ಏಕನಾಥ ಶೆಟ್ಟಿಯವರ ಮನೆಯವರಿಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.
ಸೇನಾ ಕರ್ತವ್ಯದ ನಿಮಿತ್ತ ಚೆನ್ನೈಯ ತಾಂಬರಂ ವಾಯು ನೆಲೆಯಿಂದ ಅಂಡಮಾನ್‌ ಪೋರ್ಟ್‌ಭೇರ್‌ಗೆ 2016ರ ಜುಲೈ 22ರಂದು ಪ್ರಯಾಣ ಬೆಳೆಸಿದ್ದ ಭಾರತೀಯ ಏರ್ ಪೋಸ್೯ ವಿಮಾನ ಬಂಗಾಲಕೊಲ್ಲಿ ಸಮುದ್ರದ ಮೇಲೆ ಹಾರುತ್ತಿದ್ದಾಗ ಸಂಪರ್ಕ ಕಡಿತಗೊಂಡಿತ್ತು. ಅದರಲ್ಲಿದ್ದ ಗುರುವಾಯನಕೆರೆಯ ಏಕನಾಥ ಶೆಟ್ಟಿ ಸೇರಿ 29 ಜನ ಸೈನಿಕರ ಸುಳಿವು ಇಂದಿಗೂ ನಿಗೂಢವಾಗಿದೆ. ಬೆಳಗ್ಗೆ 8.30ಕ್ಕೆ ವಿಮಾನ ಹೊರಟಿದ್ದು 9.12ಕ್ಕೆ ನಿಲ್ದಾಣದೊಂದಿಗಿನ ಸಂಪರ್ಕ ಕಡಿತಗೊಂಡಿತ್ತು. 11.45ಕ್ಕೆ ಪೋರ್ಟ್‌ಭೇರ್‌ಗೆ ತಲುಪಬೇಕಿದ್ದ ವಿಮಾನ ಕಣ್ಮರೆಯಾಗಿರುವುದಾಗಿ ಮಧ್ಯಾಹ್ನ 1.50ಕ್ಕೆ ವಾಯುಸೇನೆ ಪ್ರಕಟಿಸಿತ್ತು. ಪತ್ತೆಗಾಗಿ ಕೇಂದ್ರ ಸರಕಾರ ಹಾಗೂ ಮಿಲಿಟರಿ ತಜ್ಞರು ಸತತ ಮೂರು ತಿಂಗಳು ನಡೆಸಿದ್ದ ಯತ್ನಗಳು ವಿಫಲವಾದವು.
ಇದಕ್ಕಾಗಿ ಎರಡು ಪಿ-8ಎ ವಿಮಾನ, ಮೂರು ಡೋರ್ನಿಯರ್ ವಿಮಾನ, ಒಂದು ಜಲಾಂತರ್ಗಾಮಿ, ನೌಕಾ ಸೇನೆಯ 12 ನೌಕೆಗಳನ್ನು ಬಳಸಲಾಗಿತ್ತು. ವಿಮಾನವೊಂದು ಕುರುಹೇ ಇಲ್ಲದಂತೆ ನಾಪತ್ತೆಯಾಗಿರುವುದು ವಾಯುಪಡೆಯ
ಇತಿಹಾಸದಲ್ಲೇ ಇದು ಮೊದಲಾಗಿತ್ತು

ಈ ನಾಪತ್ತೆಯಾದ ವಿಮಾನದ ಅವಶೇಷ ಇದೀಗ ಪತ್ತೆಯಾಗಿದೆ ಎಂದು ವಾಯುಸೇನಾ ಪ್ರಕಟನೆ ಹೊರಡಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಈ ಬಗ್ಗೆ ಮನೆಯವರಿಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಕುಟುಂಬದ ಮೂಲಗಳು ಸ್ಪಷ್ಟಪಡಿಸಿದ್ದಾರೆ.

Related posts

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದಿಂದ ಶಿವರಾತ್ರಿ ಭಜನೆ

Suddi Udaya

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋಪೂಜೆ ಮತ್ತು ಗೊಗ್ರಾಸಕ್ಕೆ ನಗದು ಹಸ್ತಾಂತರ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya
error: Content is protected !!