25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

ಬೆಳ್ತಂಗಡಿ: 8 ವರ್ಷದ ಹಿಂದೆ ಸಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆಯಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಈ ಬಗ್ಗೆ ಏಕನಾಥ ಶೆಟ್ಟಿಯವರ ಮನೆಯವರಿಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.
ಸೇನಾ ಕರ್ತವ್ಯದ ನಿಮಿತ್ತ ಚೆನ್ನೈಯ ತಾಂಬರಂ ವಾಯು ನೆಲೆಯಿಂದ ಅಂಡಮಾನ್‌ ಪೋರ್ಟ್‌ಭೇರ್‌ಗೆ 2016ರ ಜುಲೈ 22ರಂದು ಪ್ರಯಾಣ ಬೆಳೆಸಿದ್ದ ಭಾರತೀಯ ಏರ್ ಪೋಸ್೯ ವಿಮಾನ ಬಂಗಾಲಕೊಲ್ಲಿ ಸಮುದ್ರದ ಮೇಲೆ ಹಾರುತ್ತಿದ್ದಾಗ ಸಂಪರ್ಕ ಕಡಿತಗೊಂಡಿತ್ತು. ಅದರಲ್ಲಿದ್ದ ಗುರುವಾಯನಕೆರೆಯ ಏಕನಾಥ ಶೆಟ್ಟಿ ಸೇರಿ 29 ಜನ ಸೈನಿಕರ ಸುಳಿವು ಇಂದಿಗೂ ನಿಗೂಢವಾಗಿದೆ. ಬೆಳಗ್ಗೆ 8.30ಕ್ಕೆ ವಿಮಾನ ಹೊರಟಿದ್ದು 9.12ಕ್ಕೆ ನಿಲ್ದಾಣದೊಂದಿಗಿನ ಸಂಪರ್ಕ ಕಡಿತಗೊಂಡಿತ್ತು. 11.45ಕ್ಕೆ ಪೋರ್ಟ್‌ಭೇರ್‌ಗೆ ತಲುಪಬೇಕಿದ್ದ ವಿಮಾನ ಕಣ್ಮರೆಯಾಗಿರುವುದಾಗಿ ಮಧ್ಯಾಹ್ನ 1.50ಕ್ಕೆ ವಾಯುಸೇನೆ ಪ್ರಕಟಿಸಿತ್ತು. ಪತ್ತೆಗಾಗಿ ಕೇಂದ್ರ ಸರಕಾರ ಹಾಗೂ ಮಿಲಿಟರಿ ತಜ್ಞರು ಸತತ ಮೂರು ತಿಂಗಳು ನಡೆಸಿದ್ದ ಯತ್ನಗಳು ವಿಫಲವಾದವು.
ಇದಕ್ಕಾಗಿ ಎರಡು ಪಿ-8ಎ ವಿಮಾನ, ಮೂರು ಡೋರ್ನಿಯರ್ ವಿಮಾನ, ಒಂದು ಜಲಾಂತರ್ಗಾಮಿ, ನೌಕಾ ಸೇನೆಯ 12 ನೌಕೆಗಳನ್ನು ಬಳಸಲಾಗಿತ್ತು. ವಿಮಾನವೊಂದು ಕುರುಹೇ ಇಲ್ಲದಂತೆ ನಾಪತ್ತೆಯಾಗಿರುವುದು ವಾಯುಪಡೆಯ
ಇತಿಹಾಸದಲ್ಲೇ ಇದು ಮೊದಲಾಗಿತ್ತು

ಈ ನಾಪತ್ತೆಯಾದ ವಿಮಾನದ ಅವಶೇಷ ಇದೀಗ ಪತ್ತೆಯಾಗಿದೆ ಎಂದು ವಾಯುಸೇನಾ ಪ್ರಕಟನೆ ಹೊರಡಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಈ ಬಗ್ಗೆ ಮನೆಯವರಿಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಕುಟುಂಬದ ಮೂಲಗಳು ಸ್ಪಷ್ಟಪಡಿಸಿದ್ದಾರೆ.

Related posts

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ: ನವೀಕರಣಗೊಂಡ ಸಭಾಭವನ ಹಾಗೂ ಹೊಸದಾಗಿ ನಿರ್ಮಿಸಿದ ಪಾಕ ಶಾಲೆ, ಭೋಜನ ಶಾಲೆಯ ಲೋಕಾರ್ಪಣೆ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ರವರಿಂದ ಗೌರವಾರ್ಪಣೆ

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!