April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

ಮುಂಡಾಜೆ: ಜ.11 ರಿಂದ ಜ. 17 ರ ವರೆಗೆ ದೇಶದಾದ್ಯಂತ ನಡೆಯುತ್ತಿರುವ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024 ರ ಅಂಗವಾಗಿ ಮುಂಡಾಜೆ ಪದವಿ ಪೂರ್ವ ಕಾಲೇಜು, ಮುಂಡಾಜೆ ಇಲ್ಲಿನ ರೋವರ್ಸ್ & ರೇಂಜರ್ಸ್ ವಿಭಾಗದ ವತಿಯಿಂದ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಎಎಸ್ ಐ ಹರಿಪ್ರಸಾದ್ ಇವರು ರಸ್ತೆ ಸುರಕ್ಷತೆಯ ಪಾಲನೆ ಹಾಗೂ ಸಂಚಾರಿ ನಿಯಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರವಾಗಿ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಜಾಲಿ ಓ ಎ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆಯ ಸಂಚಾಲಕರಾದ ನಾರಾಯಣ ಗೌಡ ಕೊಳಂಬೆ, ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಸುನಿಲ್, ರೇಂಜರ್ ಲೀಡರ್ ವಸಂತಿ, ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ಕೆ ಉಪಸ್ಥಿತರಿದ್ದರು.


ರೇಂಜರ್ ವಿದ್ಯಾರ್ಥಿನಿಯರಾದ ಮಧುಶ್ರೀ ಸ್ವಾಗತಿಸಿ, ಸಂಪದಾ ಕಾರ್ಯಕ್ರಮವನ್ನು ನಿರೂಪಿಸಿ, ಶ್ರಾವ್ಯ ಧನ್ಯವಾದಗೈದರು.

Related posts

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya

ಅ.20 : ಮುಂಡಾಜೆ ಅನುದಾನಿತ ಫ್ರೌಡ ಶಾಲೆಯಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya

ಉಜಿರೆ: ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ ನಿಧನ

Suddi Udaya
error: Content is protected !!