23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

ಮುಂಡಾಜೆ: ಜ.11 ರಿಂದ ಜ. 17 ರ ವರೆಗೆ ದೇಶದಾದ್ಯಂತ ನಡೆಯುತ್ತಿರುವ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024 ರ ಅಂಗವಾಗಿ ಮುಂಡಾಜೆ ಪದವಿ ಪೂರ್ವ ಕಾಲೇಜು, ಮುಂಡಾಜೆ ಇಲ್ಲಿನ ರೋವರ್ಸ್ & ರೇಂಜರ್ಸ್ ವಿಭಾಗದ ವತಿಯಿಂದ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಎಎಸ್ ಐ ಹರಿಪ್ರಸಾದ್ ಇವರು ರಸ್ತೆ ಸುರಕ್ಷತೆಯ ಪಾಲನೆ ಹಾಗೂ ಸಂಚಾರಿ ನಿಯಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರವಾಗಿ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಜಾಲಿ ಓ ಎ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆಯ ಸಂಚಾಲಕರಾದ ನಾರಾಯಣ ಗೌಡ ಕೊಳಂಬೆ, ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಸುನಿಲ್, ರೇಂಜರ್ ಲೀಡರ್ ವಸಂತಿ, ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ಕೆ ಉಪಸ್ಥಿತರಿದ್ದರು.


ರೇಂಜರ್ ವಿದ್ಯಾರ್ಥಿನಿಯರಾದ ಮಧುಶ್ರೀ ಸ್ವಾಗತಿಸಿ, ಸಂಪದಾ ಕಾರ್ಯಕ್ರಮವನ್ನು ನಿರೂಪಿಸಿ, ಶ್ರಾವ್ಯ ಧನ್ಯವಾದಗೈದರು.

Related posts

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಬಂಗೇರರು ಕೊನೆಯ ಬಾರಿ ವಿಧಾನಸೌಧಕ್ಕೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿ ಗೌರವ ನೀಡಿದ ಮುಖ್ಯಮಂತ್ರಿಗಳು

Suddi Udaya

ಬೇಸಿಗೆ ರಜೆ ಮುಗಿಸಿ ವಿದ್ಯಾಕೇಂದ್ರಕ್ಕೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು: ಬಜಿರೆ ಪಿ.ಎಂ.ಶ್ರೀ ಶಾಲಾ ಪ್ರಾರಂಭೋತ್ಸವ: ಶಾಲೆಯಲ್ಲಿ ಮಕ್ಕಳ ಕಲರವ-ಪಾಲಕರ ಸಂಭ್ರಮ

Suddi Udaya

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ರೂ. 164.75 ಕೋಟಿ ವ್ಯವಹಾರ, ರೂ.72.70 ಲಕ್ಷ ನಿವ್ವಳ ಲಾಭ, ಶೇ.16 ಡಿವಿಡೆಂಟ್ ಘೋಷಣೆ

Suddi Udaya

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya
error: Content is protected !!