ನಡ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ನಿರ್ದೇಶನದಂತೆ ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕದ ವತಿಯಿಂದ ಜ.12ರಂದು ವಿವೇಕಾನಂದ ಜಯಂತಿಯನ್ನು ಆಚರಿಸಲಾಯಿತು.
ರೇಂಜರ್ಸ್ ವಿದ್ಯಾರ್ಥಿನಿಯರಿಗೆ ರಸ ಪ್ರಶ್ನೆ ಸ್ಪರ್ಧೆ ಹಾಗೂ ಏಕಾಗ್ರತೆ ಪರೀಕ್ಷಣಾ ಸ್ಪರ್ಧೆಗಳನ್ನು ನಡೆಸಲಾಯಿತು.
ರೇಂಜರ್ ಲೀಡರ್ ವಸಂತಿ ಪಿ. ರವರು ವಿವೇಕಾನಂದರ ತ್ಯಾಗ ಸೇವೆಗಳನ್ನು ಉದಾಹರಣೆ ಸಹಿತ ವಿವರಿಸಿ, ಅವರ ಆದರ್ಶಗಳನ್ನು ಅನುಸರಿಸುವಂತೆ ಕರೆ ನೀಡಿದರು. ಅಸ್ಮಿತಾ ಹಾಗೂ ಯಕ್ಷಿತಾ ವಿವೇಕಾನಂದರ ಬಗ್ಗೆ ಮಾತನಾಡಿದರು.
ನಿಕಿತಾ ಸ್ವಾಗತಿಸಿದರು. ಸುದೀಕ್ಷಾ ವಂದಿಸಿದರು. ಸುಪ್ರೀತಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರು ಸಹಕರಿಸಿದರು. ಪ್ರಾಂಶುಪಾಲ ಚಂದ್ರಶೇಖರ್ ಇವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು.