23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ: ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

ನಡ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ನಿರ್ದೇಶನದಂತೆ ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕದ ವತಿಯಿಂದ ಜ.12ರಂದು ವಿವೇಕಾನಂದ ಜಯಂತಿಯನ್ನು ಆಚರಿಸಲಾಯಿತು.

ರೇಂಜರ್ಸ್ ವಿದ್ಯಾರ್ಥಿನಿಯರಿಗೆ ರಸ ಪ್ರಶ್ನೆ ಸ್ಪರ್ಧೆ ಹಾಗೂ ಏಕಾಗ್ರತೆ ಪರೀಕ್ಷಣಾ ಸ್ಪರ್ಧೆಗಳನ್ನು ನಡೆಸಲಾಯಿತು.

ರೇಂಜರ್ ಲೀಡರ್ ವಸಂತಿ ಪಿ. ರವರು ವಿವೇಕಾನಂದರ ತ್ಯಾಗ ಸೇವೆಗಳನ್ನು ಉದಾಹರಣೆ ಸಹಿತ ವಿವರಿಸಿ, ಅವರ ಆದರ್ಶಗಳನ್ನು ಅನುಸರಿಸುವಂತೆ ಕರೆ ನೀಡಿದರು. ಅಸ್ಮಿತಾ ಹಾಗೂ ಯಕ್ಷಿತಾ ವಿವೇಕಾನಂದರ ಬಗ್ಗೆ ಮಾತನಾಡಿದರು.

ನಿಕಿತಾ ಸ್ವಾಗತಿಸಿದರು. ಸುದೀಕ್ಷಾ ವಂದಿಸಿದರು. ಸುಪ್ರೀತಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರು ಸಹಕರಿಸಿದರು. ಪ್ರಾಂಶುಪಾಲ ಚಂದ್ರಶೇಖರ್ ಇವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು.

Related posts

ಸೌತಡ್ಕ ಬಯಲು ಗಣಪತಿ ದೇವಸ್ಥಾನಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಬೆಳ್ತಂಗಡಿ “ಜನ ಸ್ಪಂದನ ಕಾರ್ಯಕ್ರಮ ಮುಂದೂಡಿಕೆ

Suddi Udaya

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ

Suddi Udaya

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

Suddi Udaya

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya
error: Content is protected !!