25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು.

ಬಳಂಜ ಶಾಲಾಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮನೋಹರ ಬಳಂಜ ಯುವ ದಿನಾಚರಣೆಯ ಬಗ್ಗೆ ಮಾತನ್ನಾಡಿದರು. ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಅವರು ಸ್ವಾಮಿ ವಿವೇಕಾನಂದರ ತತ್ವ ಸಿದ್ದಾಂತದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ವಲಯ XV JCI ಇಂಡಿಯಾದ ವಲಯ ಉಪಾಧ್ಯಕ್ಷರಾದ JFM ಶಂಕರ್ ರಾವ್ ಉಪಸ್ಥಿತರಿದ್ದರು.ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಘಟಕಾಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ಅಧ್ಯಕ್ಷತೆ ವಹಿಸಿದ್ದರು.

ಘಟಕ ಪೂರ್ವಾಧ್ಯಕ್ಷ ವಸಂತಶೆಟ್ಟಿ ಶ್ರದ್ಧಾ ವೇದಿಕೆ ಆಹ್ವಾನ ಮಾಡಿದರು. ಜೆ.ಸಿ ಅನನ್ಯ ಜೈನ್ ಜೇಸಿವಾಣಿ ಉದ್ಘೋಷಿಸಿದರು. ಜೆ.ಸಿ.ಐ ಬೆಳ್ತಂಗಡಿ ಅಧ್ಯಕ್ಷ ರಂಜಿತ್ ಎಚ್.ಡಿ. ಸ್ವಾಗತಿಸಿದರು. ದೀಕ್ಷಾ ಗಣೇಶ್ ಮತ್ತು ಜೆಸಿ ಭರತ್ ಅತಿಥಿಗಳನ್ನು ಪರಿಚಯಿಸಿದರು. ಕಾರ್ಯದರ್ಶಿ ಅನುದೀಪ್ ಜೈನ್ ವಂದಿಸಿದರು.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಭಕ್ತಾಧಿಗಳಿಂದ ಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಸಂಭ್ರಮಸಿದ ಬಳಂಜ- ನಾಲ್ಕೂರಿನ ಮತದಾರರು ಬಿರುಸಿನ ಮತದಾನ, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಸ್ಸಾಂ ಮುಖ್ಯಮಂತ್ರಿ ಗೌರವಾರ್ಪಣೆ

Suddi Udaya

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಮಾಲೋಚನಾ ಸಭೆ

Suddi Udaya

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

Suddi Udaya
error: Content is protected !!