24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

ಶಿರ್ಲಾಲು‌ ಗ್ರಾಮ‌ ಪಂಚಾಯತ್ ಸಭಾಭವನದಲ್ಲಿ ವಿಕಲಚೇತನರ ಸಮನ್ವಯ ಗ್ರಾಮ ಸಭೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಎಂ ಇವರ ಅಧ್ಯಕ್ಷತೆಯಲ್ಲಿ ಜ.12ರಂದು ನಡೆಸಲಾಯಿತು.

ತಾಲೂಕು ಪಂಚಾಯತ್ ನ ವಿವಿದ್ದೊದ್ದೇಶ ಪುನರ್ವಸತಿ ಸಂಯೋಜಕ ಜೋನ್ ಬ್ಯಾಪ್ಟಿಸ್ಟ್ ಡಿ ಸೋಜಾ ಇವರು ಭಾಗವಹಿಸಿ ವಿಕಲಚೇತನರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳಾದ ವಿಶಿಷ್ಟ ಗುರುತಿನ ಚೀಟಿ, ಬಸ್ ಪಾಸ್, ಸಾಧನ ಸಲಕರಣೆಗಳು ಹಾಗೂ ಎಂಡೋಸಲ್ಫಾನ್ ಕಾಡ್೯ ನ ಬಗ್ಗೆ ಮಾಹಿತಿ ನೀಡಿದರು.


ಸಿಹೆಚ್ ಒ ರವರು ಆರೋಗ್ಯಕಾಡ್೯ ನ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಅಧ್ಯಕ್ಷೆ ಉಷಾ ಎಂ. ಮಾತನಾಡಿ ಗ್ರಾಮ ಪಂಚಾಯತ್ ನಿಂದ ಸಿಗುವ ಸೌಲಭ್ಯಗಳನ್ನು ತಿಳಿಸಿದರು ಹಾಗೂ ವಿಕಲಚೇತನರ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ತಿಳಿಸಲು ಹೇಳಿದರು.


ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೋಮನಾಥ ಬಂಗೇರ, ಪಂಚಾಯತ್ ಕಾರ್ಯದರ್ಶಿಯವರು, ಹಾಗೂ ಪಂಚಾಯತ್ ಸದಸ್ಯರು ಮತ್ತು ಅಂಗನವಾಡಿ, ಆಶಾ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ, ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದರು.


ಪಂಚಾಯತ್ ಸಿಬ್ಬಂದಿ ಪವಿತಾ ಇವರ ನಿರೂಪಣೆಯೊಂದಿಗೆ ಪುನರ್ವಸತಿ ಕಾರ್ಯಕರ್ತ ಹರೀಶ್ ಧನ್ಯವಾದವಿತ್ತರು.

Related posts

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ನಾಲ್ಕೂರು: ಹುಂಬೆಜೆ ಮನೆಯ ಜನಾರ್ಧನ ಪೂಜಾರಿ ನಿಧನ

Suddi Udaya

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

Suddi Udaya
error: Content is protected !!