25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

ಶಿರ್ಲಾಲು‌ ಗ್ರಾಮ‌ ಪಂಚಾಯತ್ ಸಭಾಭವನದಲ್ಲಿ ವಿಕಲಚೇತನರ ಸಮನ್ವಯ ಗ್ರಾಮ ಸಭೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಎಂ ಇವರ ಅಧ್ಯಕ್ಷತೆಯಲ್ಲಿ ಜ.12ರಂದು ನಡೆಸಲಾಯಿತು.

ತಾಲೂಕು ಪಂಚಾಯತ್ ನ ವಿವಿದ್ದೊದ್ದೇಶ ಪುನರ್ವಸತಿ ಸಂಯೋಜಕ ಜೋನ್ ಬ್ಯಾಪ್ಟಿಸ್ಟ್ ಡಿ ಸೋಜಾ ಇವರು ಭಾಗವಹಿಸಿ ವಿಕಲಚೇತನರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳಾದ ವಿಶಿಷ್ಟ ಗುರುತಿನ ಚೀಟಿ, ಬಸ್ ಪಾಸ್, ಸಾಧನ ಸಲಕರಣೆಗಳು ಹಾಗೂ ಎಂಡೋಸಲ್ಫಾನ್ ಕಾಡ್೯ ನ ಬಗ್ಗೆ ಮಾಹಿತಿ ನೀಡಿದರು.


ಸಿಹೆಚ್ ಒ ರವರು ಆರೋಗ್ಯಕಾಡ್೯ ನ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಅಧ್ಯಕ್ಷೆ ಉಷಾ ಎಂ. ಮಾತನಾಡಿ ಗ್ರಾಮ ಪಂಚಾಯತ್ ನಿಂದ ಸಿಗುವ ಸೌಲಭ್ಯಗಳನ್ನು ತಿಳಿಸಿದರು ಹಾಗೂ ವಿಕಲಚೇತನರ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ತಿಳಿಸಲು ಹೇಳಿದರು.


ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೋಮನಾಥ ಬಂಗೇರ, ಪಂಚಾಯತ್ ಕಾರ್ಯದರ್ಶಿಯವರು, ಹಾಗೂ ಪಂಚಾಯತ್ ಸದಸ್ಯರು ಮತ್ತು ಅಂಗನವಾಡಿ, ಆಶಾ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ, ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದರು.


ಪಂಚಾಯತ್ ಸಿಬ್ಬಂದಿ ಪವಿತಾ ಇವರ ನಿರೂಪಣೆಯೊಂದಿಗೆ ಪುನರ್ವಸತಿ ಕಾರ್ಯಕರ್ತ ಹರೀಶ್ ಧನ್ಯವಾದವಿತ್ತರು.

Related posts

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ಶಾಖೆಯ ಅಧ್ಯಕ್ಷ ಚುನಾವಣೆಗೆ ವಿಘ್ನ : ಪೊಲೀಸ್ ಠಾಣೆಯ ಮೇಟ್ಟಿಲೇರಿದ ಮತದಾರರ ಪಟ್ಟಿಯ ವಿವಾದ

Suddi Udaya

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘದ ನಿರ್ದೇಶಕರಾಗಿ ಬಾಲಕೃಷ್ಣ ಗೌಡ ಕೇರಿಮಾರು ಆಯ್ಕೆ

Suddi Udaya

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಉಜಿರೆ: ಕೆಸರ್ ಡೊಂಜಿ ದಿನ ಕ್ರೀಡಾಕೂಟ

Suddi Udaya
error: Content is protected !!