September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

ಶಿರ್ಲಾಲು‌ ಗ್ರಾಮ‌ ಪಂಚಾಯತ್ ಸಭಾಭವನದಲ್ಲಿ ವಿಕಲಚೇತನರ ಸಮನ್ವಯ ಗ್ರಾಮ ಸಭೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಎಂ ಇವರ ಅಧ್ಯಕ್ಷತೆಯಲ್ಲಿ ಜ.12ರಂದು ನಡೆಸಲಾಯಿತು.

ತಾಲೂಕು ಪಂಚಾಯತ್ ನ ವಿವಿದ್ದೊದ್ದೇಶ ಪುನರ್ವಸತಿ ಸಂಯೋಜಕ ಜೋನ್ ಬ್ಯಾಪ್ಟಿಸ್ಟ್ ಡಿ ಸೋಜಾ ಇವರು ಭಾಗವಹಿಸಿ ವಿಕಲಚೇತನರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳಾದ ವಿಶಿಷ್ಟ ಗುರುತಿನ ಚೀಟಿ, ಬಸ್ ಪಾಸ್, ಸಾಧನ ಸಲಕರಣೆಗಳು ಹಾಗೂ ಎಂಡೋಸಲ್ಫಾನ್ ಕಾಡ್೯ ನ ಬಗ್ಗೆ ಮಾಹಿತಿ ನೀಡಿದರು.


ಸಿಹೆಚ್ ಒ ರವರು ಆರೋಗ್ಯಕಾಡ್೯ ನ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಅಧ್ಯಕ್ಷೆ ಉಷಾ ಎಂ. ಮಾತನಾಡಿ ಗ್ರಾಮ ಪಂಚಾಯತ್ ನಿಂದ ಸಿಗುವ ಸೌಲಭ್ಯಗಳನ್ನು ತಿಳಿಸಿದರು ಹಾಗೂ ವಿಕಲಚೇತನರ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ತಿಳಿಸಲು ಹೇಳಿದರು.


ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೋಮನಾಥ ಬಂಗೇರ, ಪಂಚಾಯತ್ ಕಾರ್ಯದರ್ಶಿಯವರು, ಹಾಗೂ ಪಂಚಾಯತ್ ಸದಸ್ಯರು ಮತ್ತು ಅಂಗನವಾಡಿ, ಆಶಾ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ, ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದರು.


ಪಂಚಾಯತ್ ಸಿಬ್ಬಂದಿ ಪವಿತಾ ಇವರ ನಿರೂಪಣೆಯೊಂದಿಗೆ ಪುನರ್ವಸತಿ ಕಾರ್ಯಕರ್ತ ಹರೀಶ್ ಧನ್ಯವಾದವಿತ್ತರು.

Related posts

ಡಿ 19 :ಉಜಿರೆ  ಗ್ರಾ.ಪಂ.ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಿಸರ್ಗದ ಮಡಿಲಲ್ಲಿ ಪರಿಸರ ಪಾಠ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya
error: Content is protected !!