ಕನ್ಯಾಡಿ-1: 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯ ಹನುಮಂತರಾಯ ರವರಿಗೆ ರಜತ ಸಂಭ್ರಮ

Suddi Udaya

ಕನ್ಯಾಡಿ-1: ಕನ್ಯಾಡಿ ಸರಕಾರಿ ಶಾಲೆಯಲ್ಲಿ ಕಳೆದ 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯರಾದ ಹನುಮಂತರಾಯ ಇವರ ನಿಸ್ವಾರ್ಥ ಸೇವೆಯ ರಜತ ಸಂಭ್ರಮ ಕಾರ್ಯಕ್ರಮವು ನಡೆಯಿತು.


ಪ್ರಸ್ತುತ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ನೋಣಯ್ಯ ಗೌಡ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಸುನಿಲ್ ಶೆಟ್ಟಿ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.


13 ಜನವರಿ1999ಕ್ಕೆ ಸರಕಾರಿ ಸೇವೆಗೆ ಸೇರಿ, ಇಂದು ಸರಿಯಾಗಿ 25 ವರ್ಷ ಪೂರ್ಣಗೊಳಿಸಿದ ಸವಿನೆನಪಿಗಾಗಿ ಹನುಮಂತರಾಯ ಇವರನ್ನು ಶಾಲೆಯ ಎಸ್ ಡಿ ಎಂ ಸಿ, ಶಿಕ್ಷಕ ವೃಂದ ಪಾಲಕರು ಹಾಗೂ ವಿದ್ಯಾರ್ಥಿಗಳ ಪರವಾಗಿ ಆತ್ಮೀಯವಾಗಿ ಸನ್ಮಾನಿಸಲಾಯಿತು.


ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಶ್ರೀಯುತರು ಕಳೆದ 25 ವರ್ಷಗಳಿಂದ ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಸರ್ವರ ಸಹಕಾರ ಅತ್ಯಗತ್ಯ. ಅದೇ ರೀತಿ ತಮಗೆ ಸಹಕರಿಸಿದ ಸರ್ವರಿಗೂ ಕೃತಜ್ಞತೆಗಳನ್ನು ಸಲ್ಲಿಸಿದರು.
ಎಸ್ ಡಿ ಎಂ ಸಿ ಅಧ್ಯಕ್ಷ ನೋಣಯ್ಯ ಗೌಡ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಸುನಿಲ್ ಶೆಟ್ಟಿ, ಶಿಕ್ಷಕರಾದ ವಿಕಾಸ್ ರಾವ್, ರಾಕೇಶ್, ಶ್ರೀಮತಿ ನಿಶ್ಮಿತಾ ಇವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ವಿಕಾಸ್ ರಾವ್ ಪ್ರಾಸ್ತವಿಸಿ , ಸ್ವಾಗತಿಸಿದರು. ಶ್ರೀಮತಿ ನಿಶ್ಮಿತಾ ಧನ್ಯವಾದವನ್ನಿತ್ತರು. ಶ್ರೀಮತಿ ಪ್ರಮೀಳಾ ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀಮತಿ ಹರಿತ ಸಹಕರಿಸಿದರು. ಕಾರ್ಯಕ್ರಮಕ್ಕೆ ಹಳೆ ವಿದ್ಯಾರ್ಥಿಗಳು, ಎಸ್ ಡಿ ಎಂ ಸಿ ಹಾಗೂ ಪಾಲಕರು ಸಹಕಾರವನ್ನು ಇತ್ತರು.

Leave a Comment

error: Content is protected !!