23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ-1: 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯ ಹನುಮಂತರಾಯ ರವರಿಗೆ ರಜತ ಸಂಭ್ರಮ

ಕನ್ಯಾಡಿ-1: ಕನ್ಯಾಡಿ ಸರಕಾರಿ ಶಾಲೆಯಲ್ಲಿ ಕಳೆದ 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯರಾದ ಹನುಮಂತರಾಯ ಇವರ ನಿಸ್ವಾರ್ಥ ಸೇವೆಯ ರಜತ ಸಂಭ್ರಮ ಕಾರ್ಯಕ್ರಮವು ನಡೆಯಿತು.


ಪ್ರಸ್ತುತ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ನೋಣಯ್ಯ ಗೌಡ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಸುನಿಲ್ ಶೆಟ್ಟಿ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.


13 ಜನವರಿ1999ಕ್ಕೆ ಸರಕಾರಿ ಸೇವೆಗೆ ಸೇರಿ, ಇಂದು ಸರಿಯಾಗಿ 25 ವರ್ಷ ಪೂರ್ಣಗೊಳಿಸಿದ ಸವಿನೆನಪಿಗಾಗಿ ಹನುಮಂತರಾಯ ಇವರನ್ನು ಶಾಲೆಯ ಎಸ್ ಡಿ ಎಂ ಸಿ, ಶಿಕ್ಷಕ ವೃಂದ ಪಾಲಕರು ಹಾಗೂ ವಿದ್ಯಾರ್ಥಿಗಳ ಪರವಾಗಿ ಆತ್ಮೀಯವಾಗಿ ಸನ್ಮಾನಿಸಲಾಯಿತು.


ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಶ್ರೀಯುತರು ಕಳೆದ 25 ವರ್ಷಗಳಿಂದ ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಸರ್ವರ ಸಹಕಾರ ಅತ್ಯಗತ್ಯ. ಅದೇ ರೀತಿ ತಮಗೆ ಸಹಕರಿಸಿದ ಸರ್ವರಿಗೂ ಕೃತಜ್ಞತೆಗಳನ್ನು ಸಲ್ಲಿಸಿದರು.
ಎಸ್ ಡಿ ಎಂ ಸಿ ಅಧ್ಯಕ್ಷ ನೋಣಯ್ಯ ಗೌಡ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಸುನಿಲ್ ಶೆಟ್ಟಿ, ಶಿಕ್ಷಕರಾದ ವಿಕಾಸ್ ರಾವ್, ರಾಕೇಶ್, ಶ್ರೀಮತಿ ನಿಶ್ಮಿತಾ ಇವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ವಿಕಾಸ್ ರಾವ್ ಪ್ರಾಸ್ತವಿಸಿ , ಸ್ವಾಗತಿಸಿದರು. ಶ್ರೀಮತಿ ನಿಶ್ಮಿತಾ ಧನ್ಯವಾದವನ್ನಿತ್ತರು. ಶ್ರೀಮತಿ ಪ್ರಮೀಳಾ ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀಮತಿ ಹರಿತ ಸಹಕರಿಸಿದರು. ಕಾರ್ಯಕ್ರಮಕ್ಕೆ ಹಳೆ ವಿದ್ಯಾರ್ಥಿಗಳು, ಎಸ್ ಡಿ ಎಂ ಸಿ ಹಾಗೂ ಪಾಲಕರು ಸಹಕಾರವನ್ನು ಇತ್ತರು.

Related posts

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿ ಕೇಂದ್ರದ ಯೋಜನೆ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಟೆಂಡರ್

Suddi Udaya

ಉಜಿರೆ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

Suddi Udaya

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya

ಬೆಳ್ತಂಗಡಿ: ರಶ್ಮಿ ಕನ್ಸ್ಟ್ರಕ್ಷನ್ ಮಾಲಕ ಡಿ. ಆ‌ರ್. ರಾಜು ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!