24 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

ಬೆಳ್ತಂಗಡಿ: ಏಳು ಶಾಖೆಗಳನ್ನು ಒಳಗೊಂಡ ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್ ಇದರ ದ್ವೈವಾರ್ಷಿಕ ಮಹಾಸಭೆ ಮತ್ತು ನೂತನ ಸಮಿತಿ ರಚನಾ ಕಾರ್ಯಕ್ರಮ ಜ‌.9 ರಂದು ಚಾರ್ಮಾಡಿ ಜಲಾಲಿಯಾ ನಗರ ಮದ್ರಸದಲ್ಲಿ ನಡೆಯಿತು.

ಶಂಸುದ್ದೀನ್ ದಾರಿಮಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಅಧ್ಯಕ್ಷರಾಗಿ ಹಫೀಝ್ ಚಿಬಿದ್ರೆ, ಪ್ರಧಾನ ಕಾರ್ಯದರ್ಶಿಯಾಗಿ ಸದಖತುಲ್ಲಾ ದಾರಿಮಿ ಕಕ್ಕಿಂಜೆ , ಕೋಶಾಧಿಕಾರಿಯಾಗಿ ರಫೀಕ್ ಹಾಜಿ ಅರೆಕ್ಕಲ್ ಸೋಮಂತಡ್ಕ, ಸಂಘಟನಾ ಕಾರ್ಯದರ್ಶಿಯಾಗಿ ಅಬ್ಬಾಸ್ ಇಸ್ಲಾಂಬಾದ್, ಉಪಾಧ್ಯಕ್ಷರಾಗಿ ಅಬ್ಬಾಸ್ ಜಲಾಲಿಯಾ ನಗರ, ರಶೀದ್ ಗಾಂಧಿ ನಗರ ಮತ್ತು ಝುಬೈರ್ ಫೈಝಿ ಕಕ್ಕಿಂಜೆ, ಜತೆ ಕಾರ್ಯದರ್ಶಿಗಳಾಗಿ ಸಿದ್ದೀಕ್ ಬೊಳ್ಮಿನಾರ್, ಶಂಸುದ್ದೀನ್ ಇಸ್ಲಾಂಬಾದ್ ಮತ್ತು ಆಸೀಫ್ ಸೋಮಂತಡ್ಕ ಇವರು ಆಯ್ಕೆಯಾದರು.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಯಾಸಿರ್ ಚಿಬಿದ್ರೆ, ನಝೀರ್ ಅಝ್ಹರಿ ಗಾಂಧಿನಗರ, ಶಕೀಲ್ ಅರೆಕ್ಕಲ್, ರಿಯಾಝ್ ಫೈಝಿ ಕಕ್ಕಿಂಜೆ, ಶಂಶುದ್ದೀನ್ ದಾರಿಮಿ ಸೋಮಂತಡ್ಕ, ರಹೀಂ ಮಖ್ದೂಮಿ ಬೊಳ್ಮಿನಾರ್, ಹಾರಿಸ್ ಗಾಂಧಿನಗರ, ರಫೀಕ್ ಜಲಾಲಿಯಾ ನಗರ ಮತ್ತು ಅಶ್ರಫ್ ಇಸ್ಲಾಂಬಾದ್ ಆಯ್ಕೆಯಾದರು.

ಎಸ್‌ಕೆಎಸ್‌ಎಸ್‌ಎಫ್ ಅಂಗ ಸಂಸ್ಥೆಯಾದ ಇಬಾದ್, ವಿಖಾಯ, ಸಹಚಾರಿ, ಟ್ರೆಂಡ್, ಸರ್ಗಾಲಯ, ಕ್ಯಾಂಪಸ್ ವಿಂಗ್ ಇದರ ಚೇರ್ಮನ್ ಮತ್ತು ಕನ್ವೀನರ್ ಗಳನ್ನು ಹಾಗೂ ವಲಯ ಕೌಸಿಲರ್ ಗಳನ್ನು ಆಯ್ಕೆ ಮಾಡಲಾಯಿತು.

ಸದಖತುಲ್ಲಾ ದಾರಿಮಿ ಕಕ್ಕಿಂಜೆ ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿ ಸದಸ್ಯರಾದ ನಝೀರ್ ಅಝ್ಹರಿ ಬೊಳ್ಮಿನಾರ್ ದುವಾ ನೆರವೇರಿಸಿದರು.

Related posts

ನಡ ಸ. ಪ್ರೌ. ಶಾಲಾ ಮಕ್ಕಳ ಮಾಸಿಕ ಪತ್ರಿಕೆ ‘ಮಕ್ಕಳ ವಾಣಿ’ ಬಿಡುಗಡೆ

Suddi Udaya

ಮಾ.29-ಎ.6: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಪತ್ರಿಕಾಗೋಷ್ಠಿ

Suddi Udaya

ನಿಷೇಧಿತ ಅರಣ್ಯದಲ್ಲಿ ಟ್ರಕ್ಕಿಂಗ್: 103 ಪ್ರವಾಸಿಗರು ಪೊಲೀಸರ ವಶಕ್ಕೆ

Suddi Udaya

ಜು.3: ವಿದ್ಯುತ್ ನಿಲುಗಡೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!