25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ರಸ್ತೆ ಬದಿ ನಿಂತಿದ್ದ ಮಹಿಳೆಗೆ ವ್ಯಾಗನರ್ ಡಿಕ್ಕಿ: ತಾ.ಪಂ ಮಾಜಿ ಸದಸ್ಯ ಗೋಪಿನಾಥ ನಾಯಕ್ ಅವರ ಪತ್ನಿ ಅಂಜಲಿ ನಾಯಕ್ ಗಂಭೀರ ಗಾಯ : ಮಂಗಳೂರು ಆಸ್ಪತ್ರೆಗೆ ದಾಖಲು

ಗುರುವಾಯನಕೆರೆ: ಇಲ್ಲಿಯ ಅರೆಮಲೆಬೆಟ್ಟ ದ್ವಾರದ ಬಳಿ ರಸ್ತೆ ಬದಿ ನಿಂತಿದ್ದ ಮಹಿಳೆಗೆ ವ್ಯಾಗನರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಜ.13 ರಂದು ಬೆಳಗ್ಗೆ ನಡೆದಿದೆ.
ಅರೆಮಲೆಬೆಟ್ಟು ದ್ವಾರದ ಎದುರಿನ ನಿವಾಸಿ, ತಾ.ಪಂ ಮಾಜಿ ಸದಸ್ಯ ಗೋಪಿನಾಥ ನಾಯಕ್ ಅವರ ಪತ್ನಿ ಶ್ರೀಮತಿ ಅಂಜಲಿ ನಾಯಕ್ ಅವರು ಕಾಲಿಗೆ ಗಂಭೀರ ಏಟು ತಗಲಿದ್ದು, ಅವರನ್ನು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಗೋಪಿನಾಥ ನಾಯಕ್ ಅವರು ಗುರುವಾಯನಕೆರೆಯಲ್ಲಿ ಅಂಗಡಿಯನ್ನು ಹೊಂದಿದ್ದು, ಅವರ ಪತ್ನಿ ಬೆಳಿಗ್ಗೆ ಅಂಗಡಿಗೆ ಹೋಗಲು ರಸ್ತೆ ಬದಿ ನಿಂತಿದ್ದಾಗ ಶಕ್ತಿನಗರ ಕಡೆಯಿಂದ ಗುರುವಾಯನಕೆರೆ ಕಡೆಗೆ
ವೇಗವಾಗಿ ಬಂದ ವ್ಯಾಗನರ್ ಅವರಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ಓಮಿನಿ ವ್ಯಾನ್ ಗೆ ಡಿಕ್ಕಿ ಹೊಡೆದಿದೆ. ವಾಹನ ಡಿಕ್ಕಿಯಿಂದ ಕುಸಿದು ಬಿದ್ದ‌ ಅವರನ್ನು ಕೂಡಲೇ ಚಿಕಿತ್ಸೆಗಾಗಿ ಗುರುವಾಯನಕೆರೆಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ನಾಳೆ(ಆ.3) : ಬೆಳ್ತಂಗಡಿ ಆನ್‌ಸಿಲ್ಕ್‌ನಲ್ಲಿ ಮೇಘ ಬ್ರಾಂಡೆಂಡ್ ವಸ್ತ್ರಮೇಳ: ಶೇ.20 ರಿಂದ ಶೇ70 ರಷ್ಟು ರಿಯಾಯಿತಿ

Suddi Udaya

ಧರ್ಮಸ್ಥಳ : ನಡುಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಜು. 24 ರಿಂದ ಮುಳಿಯ ಮಾನ್ಸೂನ್ ಧಮಾಕ: ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಆಕರ್ಷಕ ರಿಯಾಯಿತಿ: ಆ. 5 ಮುಳಿಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ,ಗ್ರಾಹಕರ ಸಮಾಗಮ,

Suddi Udaya
error: Content is protected !!