23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

ಬೆಳ್ತಂಗಡಿ : ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮ ಎಂಬಲ್ಲಿ ಶುಶ್ರೂಷೆಯ ಬಗ್ಗೆ ದಾಖಲಾಗಿದ್ದ ಮಂಗಳೂರು ತಾಲೂಕು ಹೊಸಬೆಟ್ಟು, ಸುರತ್ಕಲ್‌, ನಂದಶ್ರೀ ಅಪಾರ್ಟ್‌ ಮೆಂಟ್‌, ಮುಖ್ಯ ಪ್ರಾಣ ಮಠದ ಬಳಿಯ ನಿವಾಸಿ ಸುಧಾಕರ(58) ಎಂಬವರು ನಾಪತ್ತೆಯಾಗಿರುವುದಾಗಿ ಜ.13 ರಂದು ವೇಣೂರು ಠಾಣೆಗೆ ದೂರು ನೀಡಲಾಗಿದೆ.

ಸುಧಾಕರ ಅವರು ಸುಮಾರು 20 ವರ್ಷಗಳಿಂದ, ಮನೆಬಿಟ್ಟು ಸಿಕ್ಕಿದಲ್ಲಿ ಸುತ್ತಾಡಿಕೊಂಡಿದ್ದವರು ವಿಪರೀತ ಶರಾಬು ಕುಡಿಯುವ ಚಟ ಹೊಂದಿದ್ದು ಅಪರೂಪಕ್ಕೊಮ್ಮೆ ಮನೆಗೆ ಬಂದು ಹೋಗುತ್ತಿದ್ದವರು, ಇತ್ತೀಚೆಗೆ ಮಾನಸಿಕ ಖಿನ್ನತೆಗೊಳಪಟ್ಟು ಪಣಂಬೂರು, ಬೈಕಂಪಾಡಿ ವಠಾರದಲ್ಲಿ ತುಂಬಾ ಕೀಟಲೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದವನನ್ನು ಪಡುಬಿದ್ರೆ ಆಶ್ರಮದವರು ತಮ್ಮ ಆಶ್ರಮದಲ್ಲಿ ಸೇರಿಸಿ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಬಿತ್ತರಿಸಿದ್ದನ್ನು ಕಂಡು ಅವರನ್ನು ಅಲ್ಲಿಂದ ಕರೆದುಕೊಂಡು ಬಂದು ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮ ಎಂಬಲ್ಲಿ ಶುಶ್ರೂಷೆಯ ಬಗ್ಗೆ ದಾಖಲಿಸಿದ್ದು, ಸದ್ರಿ ಸುಧಾಕರ ಜ.9 ರಂದು ರಾತ್ರಿ ಸುಮಾರು 12 ಗಂಟೆಯ ಬಳಿಕ ಆಶ್ರಮದಿಂದ ಕಾಣೆಯಾಗಿದ್ದು, ಈ ಬಗ್ಗೆ ಆಶ್ರಮದ ಮುಖ್ಯಸ್ಥರು ನೀಡಿದ ಮಾಹಿತಿಯಂತೆ ಅವರು ಸಹೋದರ ವಿಜಯ ಎಂ.ಆಶ್ರಮಕ್ಕೆ ಬಂದು ವಿಚಾರಿಸಿ ಬಳಿಕ ಸಂಬಂಧಿಕರ ಮನೆಗಳಿಗೆಲ್ಲಾ ಸಂಪರ್ಕಿಸಿ, ಭೇಟಿ ನೀಡಿ ವಿಚಾರಿಸಿದ್ದಲ್ಲದೇ, ಪಣಂಬೂರು, ಬೈಕಂಪಾಡಿ, ಸುರತ್ಕಲ್ ವಠಾರಗಳಲ್ಲಿ ಹುಡುಕಾಡಿ ಪತ್ತೆಯಾಗದೇ ಇದ್ದಾಗ ತಡವಾಗಿ ಬಂದು ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಇಳಂತಿಲ ಗ್ರಾ.ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ

Suddi Udaya

ಗೇರುಕಟ್ಟೆ : ಪುಂಡಿಕಲ್ ಕುಕ್ಕು ನಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ

Suddi Udaya

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya
error: Content is protected !!