25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

ಬೆಳ್ತಂಗಡಿ : ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮ ಎಂಬಲ್ಲಿ ಶುಶ್ರೂಷೆಯ ಬಗ್ಗೆ ದಾಖಲಾಗಿದ್ದ ಮಂಗಳೂರು ತಾಲೂಕು ಹೊಸಬೆಟ್ಟು, ಸುರತ್ಕಲ್‌, ನಂದಶ್ರೀ ಅಪಾರ್ಟ್‌ ಮೆಂಟ್‌, ಮುಖ್ಯ ಪ್ರಾಣ ಮಠದ ಬಳಿಯ ನಿವಾಸಿ ಸುಧಾಕರ(58) ಎಂಬವರು ನಾಪತ್ತೆಯಾಗಿರುವುದಾಗಿ ಜ.13 ರಂದು ವೇಣೂರು ಠಾಣೆಗೆ ದೂರು ನೀಡಲಾಗಿದೆ.

ಸುಧಾಕರ ಅವರು ಸುಮಾರು 20 ವರ್ಷಗಳಿಂದ, ಮನೆಬಿಟ್ಟು ಸಿಕ್ಕಿದಲ್ಲಿ ಸುತ್ತಾಡಿಕೊಂಡಿದ್ದವರು ವಿಪರೀತ ಶರಾಬು ಕುಡಿಯುವ ಚಟ ಹೊಂದಿದ್ದು ಅಪರೂಪಕ್ಕೊಮ್ಮೆ ಮನೆಗೆ ಬಂದು ಹೋಗುತ್ತಿದ್ದವರು, ಇತ್ತೀಚೆಗೆ ಮಾನಸಿಕ ಖಿನ್ನತೆಗೊಳಪಟ್ಟು ಪಣಂಬೂರು, ಬೈಕಂಪಾಡಿ ವಠಾರದಲ್ಲಿ ತುಂಬಾ ಕೀಟಲೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದವನನ್ನು ಪಡುಬಿದ್ರೆ ಆಶ್ರಮದವರು ತಮ್ಮ ಆಶ್ರಮದಲ್ಲಿ ಸೇರಿಸಿ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಬಿತ್ತರಿಸಿದ್ದನ್ನು ಕಂಡು ಅವರನ್ನು ಅಲ್ಲಿಂದ ಕರೆದುಕೊಂಡು ಬಂದು ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮ ಎಂಬಲ್ಲಿ ಶುಶ್ರೂಷೆಯ ಬಗ್ಗೆ ದಾಖಲಿಸಿದ್ದು, ಸದ್ರಿ ಸುಧಾಕರ ಜ.9 ರಂದು ರಾತ್ರಿ ಸುಮಾರು 12 ಗಂಟೆಯ ಬಳಿಕ ಆಶ್ರಮದಿಂದ ಕಾಣೆಯಾಗಿದ್ದು, ಈ ಬಗ್ಗೆ ಆಶ್ರಮದ ಮುಖ್ಯಸ್ಥರು ನೀಡಿದ ಮಾಹಿತಿಯಂತೆ ಅವರು ಸಹೋದರ ವಿಜಯ ಎಂ.ಆಶ್ರಮಕ್ಕೆ ಬಂದು ವಿಚಾರಿಸಿ ಬಳಿಕ ಸಂಬಂಧಿಕರ ಮನೆಗಳಿಗೆಲ್ಲಾ ಸಂಪರ್ಕಿಸಿ, ಭೇಟಿ ನೀಡಿ ವಿಚಾರಿಸಿದ್ದಲ್ಲದೇ, ಪಣಂಬೂರು, ಬೈಕಂಪಾಡಿ, ಸುರತ್ಕಲ್ ವಠಾರಗಳಲ್ಲಿ ಹುಡುಕಾಡಿ ಪತ್ತೆಯಾಗದೇ ಇದ್ದಾಗ ತಡವಾಗಿ ಬಂದು ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪುಕ್ಕಟೆ ಪ್ರಚಾರಕ್ಕಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತನ್ನದೆಂದು ಬಿಂಬಿಸುವ ಬೆಳ್ತಂಗಡಿ ಕಾಂಗ್ರೆಸಿಗರು – ಗಣೇಶ್ ಗೌಡ ನಾವೂರು

Suddi Udaya

ವಾಣಿ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಉತ್ತಮ ಫಲಿತಾಂಶ: ವಿದ್ಯಾರ್ಥಿನಿ ನವಮಿ ಗೆ 588 ಅಂಕ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಸೃಷ್ಟಿ ಆಚಾರ್ಯ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

Suddi Udaya
error: Content is protected !!