September 6, 2026
Uncategorized

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

ಬೆಳ್ತಂಗಡಿ : ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮ ಎಂಬಲ್ಲಿ ಶುಶ್ರೂಷೆಯ ಬಗ್ಗೆ ದಾಖಲಾಗಿದ್ದ ಮಂಗಳೂರು ತಾಲೂಕು ಹೊಸಬೆಟ್ಟು, ಸುರತ್ಕಲ್‌, ನಂದಶ್ರೀ ಅಪಾರ್ಟ್‌ ಮೆಂಟ್‌, ಮುಖ್ಯ ಪ್ರಾಣ ಮಠದ ಬಳಿಯ ನಿವಾಸಿ ಸುಧಾಕರ(58) ಎಂಬವರು ನಾಪತ್ತೆಯಾಗಿರುವುದಾಗಿ ಜ.13 ರಂದು ವೇಣೂರು ಠಾಣೆಗೆ ದೂರು ನೀಡಲಾಗಿದೆ.

ಸುಧಾಕರ ಅವರು ಸುಮಾರು 20 ವರ್ಷಗಳಿಂದ, ಮನೆಬಿಟ್ಟು ಸಿಕ್ಕಿದಲ್ಲಿ ಸುತ್ತಾಡಿಕೊಂಡಿದ್ದವರು ವಿಪರೀತ ಶರಾಬು ಕುಡಿಯುವ ಚಟ ಹೊಂದಿದ್ದು ಅಪರೂಪಕ್ಕೊಮ್ಮೆ ಮನೆಗೆ ಬಂದು ಹೋಗುತ್ತಿದ್ದವರು, ಇತ್ತೀಚೆಗೆ ಮಾನಸಿಕ ಖಿನ್ನತೆಗೊಳಪಟ್ಟು ಪಣಂಬೂರು, ಬೈಕಂಪಾಡಿ ವಠಾರದಲ್ಲಿ ತುಂಬಾ ಕೀಟಲೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದವನನ್ನು ಪಡುಬಿದ್ರೆ ಆಶ್ರಮದವರು ತಮ್ಮ ಆಶ್ರಮದಲ್ಲಿ ಸೇರಿಸಿ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಬಿತ್ತರಿಸಿದ್ದನ್ನು ಕಂಡು ಅವರನ್ನು ಅಲ್ಲಿಂದ ಕರೆದುಕೊಂಡು ಬಂದು ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮ ಎಂಬಲ್ಲಿ ಶುಶ್ರೂಷೆಯ ಬಗ್ಗೆ ದಾಖಲಿಸಿದ್ದು, ಸದ್ರಿ ಸುಧಾಕರ ಜ.9 ರಂದು ರಾತ್ರಿ ಸುಮಾರು 12 ಗಂಟೆಯ ಬಳಿಕ ಆಶ್ರಮದಿಂದ ಕಾಣೆಯಾಗಿದ್ದು, ಈ ಬಗ್ಗೆ ಆಶ್ರಮದ ಮುಖ್ಯಸ್ಥರು ನೀಡಿದ ಮಾಹಿತಿಯಂತೆ ಅವರು ಸಹೋದರ ವಿಜಯ ಎಂ.ಆಶ್ರಮಕ್ಕೆ ಬಂದು ವಿಚಾರಿಸಿ ಬಳಿಕ ಸಂಬಂಧಿಕರ ಮನೆಗಳಿಗೆಲ್ಲಾ ಸಂಪರ್ಕಿಸಿ, ಭೇಟಿ ನೀಡಿ ವಿಚಾರಿಸಿದ್ದಲ್ಲದೇ, ಪಣಂಬೂರು, ಬೈಕಂಪಾಡಿ, ಸುರತ್ಕಲ್ ವಠಾರಗಳಲ್ಲಿ ಹುಡುಕಾಡಿ ಪತ್ತೆಯಾಗದೇ ಇದ್ದಾಗ ತಡವಾಗಿ ಬಂದು ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮದ್ದಡ್ಕ ಲ್ಯಾನ್ಸಿ ರೋಡ್ರಿಗಸ್ ನಿಧನ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧ

Suddi Udaya

ಸೆ.18 ರಂದು ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಆದಿವಾಸಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ

Suddi Udaya
error: Content is protected !!