23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಜ.22: ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯೊಂದಿಗೆಕೋಟಿ ಕೋಟಿ ರಾಮ ಭಕ್ತರ ಅಭಿಲಾಷೆ ಈಡೇರುತ್ತಿದೆ

ಬೆಳ್ತಂಗಡಿ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಗೊಂಡು ಇದೀಗ ಭಕ್ತರ ಅಭಿಲಾಷೆಯಂತೆ ಜ.22ರಂದು ರಾಮಚಂದ್ರನ ಮೂರ್ತಿ ಪ್ರತಿಷ್ಠಾಪನೆಯಾಗುತ್ತಿದೆ. ಕೋಟಿ ಕೋಟಿ ರಾಮ ಭಕ್ತರ ಅಭಿಲಾಷೆ ಈಡೇರುತ್ತಿದೆ. ವಾದ – ವಿವಾದಗಳು ಏನೇ ಇರಲಿ ರಾಮ ಮಂದಿರ ನಿರ್ಮಾಣಗೊಂಡಿರುವುದು ಬಹುತೇಕರ ಕನಸು ನನಸಾಗಿದೆ. ಈ ನಿಟ್ಟಿನಲ್ಲಿ ಎಲ್ಲರಿಗೂ ಶುಭಾಶಯಗಳು.

ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ದಿನಗಳಿಂದ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಆದರೆ ಅದರಲ್ಲಿ ಒಂದು ವಿಚಾರಕ್ಕೆ ನನ್ನ ಸಹಮತ ಇಲ್ಲ. ರಾಮ ಮಾಂಸಹಾರಿಯಾಗಿದ್ದ ಎಂಬ ವಿಚಾರ. ಈ ವಿಚಾರ ಕೆಲವು ರಾಮಭಕ್ತರನ್ನು ಕೆರಳಿಸಿದೆ.

ಆದರೆ ನಾನು ತಿಳಿದುಕೊಂಡ ಪ್ರಕಾರ ರಾಮ ಶುದ್ಧ ಸಸ್ಯಾಹಾರಿಯಾಗಿದ್ದ. ರಾಮ ಎಂದರೆ ಆತ ಕೇವಲ ಮನುಷ್ಯನಲ್ಲ. ದೈವಾಂಶ ಸಂಭೂತ. ರಾಮಾಯಣವನ್ನು ಓದುವಾಗ ಆತ ಮಾಂಸಾಹಾರಿ ಎಂಬ ಉಲ್ಲೇಖ ಎಲ್ಲೂ ಬರುವುದಿಲ್ಲ. ರಾಮ ಮಾಂಸಾಹಾರಿಯಾಗಿರಲು ಸಾಧ್ಯವೇ ಇಲ್ಲ. ಹಣ್ಣು ಹಂಪಲುಗಳನ್ನು ತಿಂದು ಕಾಡಲ್ಲಿ ಜೀವನ ಕಳೆದ ಎಂಬ ಉಲ್ಲೇಖವೇ ಸಿಗುತ್ತದೆ.

ಹಾಗಾಗಿ ರಾಮ ಭಕ್ತರು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನಾ ಮಹೋತ್ಸವದ ಸಮಯದಲ್ಲಿಯಾದರೂ ಅಥವಾ ಮಹೋತ್ಸವದ ಸಮಯದವರೆಗಾದರೂ ಸಸ್ಯಾಹಾರಿಗಳಾಗಿ ನಿಯಮವನ್ನು ಅಳವಡಿಸಿಕೊಂಡು ರಾಮನ ಬಗ್ಗೆ ಇಲ್ಲದ ವಿಚಾರಗಳನ್ನು ಹೇಳುವವರಿಗೆ ಸೆಡ್ಡು ಹೊಡೆಯಿರಿ ಎಂದು ಮನವಿ ಮಾಡುತ್ತೇನೆ. ಹಾಗೆಯೇ ಮದ್ಯಪಾನ ಮುಂತಾದ ದುಶ್ಚಟಗಳಿಂದ ದೂರವಿದ್ದು ರಾಮ ಮಂದಿರದ ವೈಭವಕ್ಕೆ ಸಾಕ್ಷಿಯಾಗಿರಿ ಎಂದು ಮನವಿ ಮಾಡುತ್ತೇನೆ.

#ನಿರಂಜನ್ ಜೈನ್ ಕುದ್ಯಾಡಿ

Related posts

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಿ.15: ಸಾವ್ಯ ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಸಂಭ್ರಮಾಚರಣೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 341 ಕೋಟಿ ವ್ಯವಹಾರ, ರೂ. 1.53 ಕೋಟಿ ಲಾಭ, ಸದಸ್ಯರಿಗೆ ಶೇ. 13 ಡಿವಿಡೆಂಟ್

Suddi Udaya

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ : ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya
error: Content is protected !!