July 23, 2026
Uncategorized

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಾಸಭೆ: ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ೨೦೨೨-೨೩ ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ ಇವರ ಅಧ್ಯಕ್ಷತೆಯಲ್ಲಿ ಜ.೧೩ರಂದು ಸಂಘದ ಸಭಾ ಭವನದಲ್ಲಿ ಜರಗಿತು. ಸಂಘದ ಪ್ರಧಾನ ಕಾರ್ಯದರ್ಶಿ ಜಯವಿಕ್ರಮ್ ಕಲ್ಲಾಪು ವರದಿ ವಾಚಿಸಿದರು, ಕೋಶಾಧಿಕಾರಿ ಅಭಿನಂದನ್ ಹರೀಶ್ ಕುಮಾರ್ ಜಮಾ ಖರ್ಚು ಮಂಡಿಸಿದರು. ಸಂಘದ ಗೌರವ ಅಧ್ಯಕ್ಷ ಮಾಜಿ ಶಾಸಕ ಕೆ. ವಸಂತ ಬಂಗೇರ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಿತೀಶ್ ಹೆಚ್., ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಜಿತಾ ವಿ. ಬಂಗೇರ, ಸಂಘದ ಉಪಾಧ್ಯಕ್ಷ ಶೇಖರ ಬಂಗೇರ, ಜತೆ ಕಾರ್ಯದರ್ಶಿ ರಾಜೀವ್ ಸಾಲಿಯಾನ್,ಪದಾಧಿಕಾರಿಗಳು, ನಿರ್ದೇಶಕರು, ಮಾಜಿ ಅಧ್ಯಕ್ಷರುಗಳುಗಳಾದ ವಸಂತ ಸಾಲಿಯಾನ್, ಪಿ. ಕೆ. ರಾಜು ಪೂಜಾರಿ,ಪೀತಾ೦ಬರ ಹೇರಾಜೆ, ಯೋಗೀಶ್ ಕುಮಾರ್, ಜಯರಾಮ ಬಂಗೇರ ಹೇರಾಜೆ, ಭಗೀರಥ ಜಿ., ಸೋಮನಾಥ ಬಂಗೇರ, ಮಾಜಿ ನಿರ್ದೇಶಕರುಗಳು, ಸದಸ್ಯರು ಹಾಜರಿದ್ದರು. ಸಭೆಯಲ್ಲಿ ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಗೌರವ ಅಧ್ಯಕ್ಷ ಕೆ. ವಸಂತ ಬಂಗೇರ ವಿತರಿಸಿದರು. ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

Related posts

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಜು.7: ಶಾಸಕ ಹರೀಶ್ ಪೂಂಜ ರವರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳದಲ್ಲಿ ಜನಸ್ಪಂದನ ಸಭೆ

Suddi Udaya

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಡಾ. ಕೆ. ಜಯಕೀರ್ತಿ ಜೈನ್ ರಿಗೆ‌ ಅಭಿನಂದನೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ವಾಷಿ೯ಕ ರೂ.99.93 ಲಕ್ಷ ಲಾಭ – ಶೇ 15 ಡಿವಿಡೆಂಡ್ ಘೋಷಿಸಿದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮೇಲಂತಬೆಟ್ಟು ವಲಯದಲ್ಲಿ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya

ಕರ್ನಾಟಕದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಿಗೆ ತೀವ್ರ ಅನ್ಯಾಯ: ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ: ಸದನದಲ್ಲಿ ಹರೀಶ್ ಪೂಂಜ ಅಕ್ರೋಶ

Suddi Udaya
error: Content is protected !!