25.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸರಕಾರಿ ಪ್ರೌಢಶಾಲೆ ನಡದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆ:ಪೋಷಕರೇ ತಮ್ಮ ಮಕ್ಕಳಿಗೆ ಶಿಕ್ಷಕರಾಗಿ ಬೋಧನೆ

ಬೆಳ್ತಂಗಡಿ : ಜ 14ರಂದು ಶುಕ್ರವಾರ ಎಸ್.ಎಸ್.ಎಲ್.ಸಿ ಪರೀಕ್ಷಾ ಪೂರ್ವ ಸಿದ್ಧತಾ ದೃಷ್ಟಿಯಿಂದ ಪೋಷಕರ ಸಭೆಯನ್ನು ಆಯೋಜಿಸಲಾಯಿತು. ಸಭೆಯಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಮೋಹನ ಬಾಬು ಡಿ. ಇವರು ಶಾಲಾ ವ್ಯವಸ್ಥೆಗಳು, ಶೈಕ್ಷಣಿಕ ಯೋಜನೆಗಳು, ಪರೀಕ್ಷಾ ಫಲಿತಾಂಶ ಸುಧಾರಣೆಗೆ ಹಮ್ಮಿಕೊಂಡಿರುವ ವಿಶೇಷ ತರಗತಿಗಳು, ಮತ್ತು ಪೋಷಕರ ಜವಾಬ್ದಾರಿಯ ಬಗ್ಗೆ, ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಪೋಷಕರನ್ನು ನಾಲ್ಕು ಗುಂಪುಗಳನ್ನಾಗಿ ವಿಂಗಡಿಸಿ ಮುಂಬರುವ ವಾರ್ಷಿಕ ಪರೀಕ್ಷೆಗೆ ತಮ್ಮ ಮಕ್ಕಳಿಗೆ ತಾವೇ ಗುಂಪಿನಲ್ಲಿ ಚರ್ಚಿಸಿ ನಿರ್ಣಯಿಸಿದಂತೆ, ದೈನಂದಿನ ಓದು, ಸಮಯ ಪಾಲನೆ, ಶಿಕ್ಷಕರು ನೀಡಿದ ಮನೆಗೆಲಸ ಪೂರ್ಣಗೊಳಿಸಿದ ಬಗ್ಗೆ, ವಿಚಾರಣೆ, ಟಿ.ವಿ. ಮೊಬೈಲ್ ಬಳಸದಿರುವ ಬಗ್ಗೆ ಅರಿವು ಮೂಡಿಸಲಾಯಿತು.

ಪೋಷಕರು ತಮ್ಮ ಮಕ್ಕಳೊಂದಿಗೆ ಪ್ರತಿದಿನ ಕಲಿಕೆಗೆ ಸಂಬಂಧಿಸಿದ ಕನಿಷ್ಟ ಒಂದು ಗಂಟೆ ಜೊತೆಗಿದ್ದು ಸೂಕ್ತ ಸಲಹೆ ಸೂಚನೆ ನೀಡುವುದು, ಮಕ್ಕಳು ವಿಷಯ ಶಿಕ್ಷಕರ ಭೇಟಿಯ ಮೂಲಕ ಸೂಕ್ತ ಮಾರ್ಗದರ್ಶನ ಪಡೆಯುವ ಬಗ್ಗೆ ಪೋಷಕರೇ ತಮ್ಮ ಮಕ್ಕಳಿಗೆ, ಶಿಕ್ಷಕರಾಗಿ ಬೋಧನೆ

ಮಾಡಿದ್ದು ವಿಶೇಷವಾಗಿತ್ತು. ಶಾಲಾ ಶಿಕ್ಷಕ ವೃಂದ ಪ್ರತಿ ತಂಡದೊಂದಿಗಿದ್ದು ಸೂಕ್ತ ಸಲಹೆ ಸೂಚನೆ ನೀಡಿದರು.
ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಸುಧಾಕ‌ರ್, ಸಮಿತಿಯ ಸದಸ್ಯರಾದ ಧರಣೇಂದ್ರ ಜೈನ್‌, ಆನಂದ ಶೆಟ್ಟಿ, ಶ್ರೀಮತಿ ಪ್ರೇಮ, ಲಕ್ಷ್ಮಣ ನಾಯ್ಕ ಉಪಸ್ಥಿತರಿದ್ದರು. ಶಿಕ್ಷಕ ಶಿವಪುತ್ರ ಸುಣಗಾರ ಸ್ವಾಗತಿಸಿದರು, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಹಾಗೂ ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ಸುಜಯ್ ಬಿ. ವಂದಿಸಿದರು.

Related posts

ಎಸ್.ಡಿ.ಎಂ ಕಾಲೇಜಿನ ತಾಂತ್ರಿಕ ವಿದ್ಯಾಲಯದ ಗ್ರಂಥಪಾಲಕಿ ಡಾ. ರಜತಾ ಪಿ ಶೆಟ್ಟಿ ಪ್ರಬಂಧಕ್ಕೆ ಅಂತರಾಷ್ಟ ಮಟ್ಟದ ಅತ್ಯುತ್ತಮ ಪ್ರಬಂಧ ಪ್ರಶಸ್ತಿ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya
error: Content is protected !!