July 23, 2026
Uncategorized

ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಸಾವಿರಾರು ಭಜಕರಿಂದ ಅಳದಂಗಡಿ ಅರಮನೆ ನಗರಿಯಲ್ಲಿ ಭಕ್ತಿಯ ಅಲೆ ಎಬ್ಬಿಸಿದ ಕುಣಿತಾ ಭಜನೆ

ಅಳದಂಗಡಿ : ಶ್ರೀ ಸೋಮನಾಥೇಶ್ವರೀ ಭಜನಾ ಮಂಡಳಿ, ಶ್ರೀ ಸತ್ಯದೇವತಾ ದೈವಸ್ಥಾನ ಅಳದಂಗಡಿ, ಸುರೇಶ್ ಪೂಜಾರಿ ಅಭಿಮಾನಿ ಬಳಗ ಸಹಕಾರದಲ್ಲಿ ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಜ. 14 ರಂದು ಭಜನಾ ಸತ್ಸಂಗ ರಾಮಕೃಷ್ಣ ಕಾಟುಕುಕ್ಕೆ ಸಂಗೀತಾ ಹಾಡಿನೊಂದಿಗೆ ಕುಣಿತ ಭಜನೆಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಎದುರು ಮೈದಾನದಲ್ಲಿ ನಡೆಯಿತು.

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದಲ್ಲಿ ದೀಪ ಪ್ರಜ್ವಲಿಸುವುದರೊಂದಿಗೆ ಮೈದಾನದಲ್ಲಿಕುಣಿತ ಭಜನೆಯ ಉದ್ಘಾಟನೆಯನ್ನು ಅಳದಂಗಡಿ ಶ್ರೀ ಕ್ಲಿನಿಕ್ ನ ವೈದ್ಯರಾದ ಡಾ.ಎನ್.ಎಂ ತುಳುಪುಳೆ ನೆರವೇರಿಸಿದರು.

ಧಾರ್ಮಿಕ ಸಮಾರಂಭದ ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ಮುಂಬಯಿ ಉದ್ಯಮಿ ಸುರೇಶ್ ಪೂಜಾರಿ ಮುಂಬಯಿ,ಗುಜರಾತ್ ಉದ್ಯಮಿ ಶೇಖರ ದೇವಾಡಿಗ ಪಾಲಬೆ,ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ,ಉಪಾಧ್ಯಕ್ಷ ಜನಾರ್ದನ ಪೂಜಾರಿ ಕೊಡಂಗೆ, ಅಳದಂಗಡಿ ಸಿ.ಎ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು, ಸದಾನಂದ ಆಚಾರ್ಯ ಸುಲ್ಕೇರಿಮೊಗ್ರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಳದಂಗಡಿ ಅರಮನೆಯ ಶ್ರೀ ಶಿವಪ್ರಸಾದ್ ಅಜಿಲರು, ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಹಾಗೂ ಸುಪ್ರೀತ್ ಜೈನ್, ಹರೀಶ್ ವೈ ಚಂದ್ರಮ ಕಾರ್ಯಕ್ರಮದ ನೃತೃತ್ವ ವಹಿಸಿದ್ದರು.ಆಮಂತ್ರಣ ಪರಿವಾರದ ಸಂಚಾಲಕ ವಿಜಯ್ ಕುಮಾರ್ ಜೈನ್ ಸ್ವಾಗತಿಸಿ,ವಂದಿಸಿದರು.

Related posts

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ‘ಯೋಗ ರತ್ನ ಪ್ರಶಸ್ತಿ’ಗೆ ಚಿನ್ಮಯಿ ಎ. ಬೆಂಗಳೂರು ಆಯ್ಕೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya

ಇಂದಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗಣಿತ ರಿಲೇ ಸ್ಪರ್ಧೆ ಹಾಗೂ ಪ್ರತಿಭಾ ಕಾರಂಜಿಯ ಆಶುಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂಭಶ್ರೀ ವಿದ್ಯಾಸಂಸ್ಥೆಗೆ ರನ್ನರ್ ಅಪ್

Suddi Udaya

ನಾವೂರು: ಮೋರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನೆ

Suddi Udaya
error: Content is protected !!