ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

Suddi Udaya

ಬೆಳ್ತಂಗಡಿ:ರಬ್ಬರ್ ಬೆಲೆಯು ಪಾತಾಳಕ್ಕೆ ಕುಸಿದಿದ್ದು ಇದರಿಂದ ರಬ್ಬರ್ ಕೃಷಿಕರು ಭಾರಿ ಸಮಸ್ಯೆ ಎದುರಿಸುವಂತಾಗಿದೆ. ಈ ಬಗ್ಗೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಕೇಂದ್ರ ಕೃಷಿ ಸಚಿವರಿಗೆ ಸಂಸದರ ಮೂಲಕ ಮನವಿ ಸಲ್ಲಿಸಲಾಯಿತು.

ಉಜಿರೆ ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ ಜಿ.ಭಿಡೆ, ಉಪಾಧ್ಯಕ್ಷ ಮಚ್ಚಿಮಲೆ ಅನಂತ ಭಟ್ ನಿರ್ದೇಶಕ ಎಚ್.ಪದ್ಮ ಗೌಡ ಹಾಗೂ ಸಿಇಒ ರಾಜು ಶೆಟ್ಟಿ ಉಪಸ್ಥಿತರಿದ್ದರು.

Leave a Comment

error: Content is protected !!