23.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸರಕಾರಿ ಪ್ರೌಢಶಾಲೆ ನಡದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆ:ಪೋಷಕರೇ ತಮ್ಮ ಮಕ್ಕಳಿಗೆ ಶಿಕ್ಷಕರಾಗಿ ಬೋಧನೆ

ಬೆಳ್ತಂಗಡಿ : ಜ 14ರಂದು ಶುಕ್ರವಾರ ಎಸ್.ಎಸ್.ಎಲ್.ಸಿ ಪರೀಕ್ಷಾ ಪೂರ್ವ ಸಿದ್ಧತಾ ದೃಷ್ಟಿಯಿಂದ ಪೋಷಕರ ಸಭೆಯನ್ನು ಆಯೋಜಿಸಲಾಯಿತು. ಸಭೆಯಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಮೋಹನ ಬಾಬು ಡಿ. ಇವರು ಶಾಲಾ ವ್ಯವಸ್ಥೆಗಳು, ಶೈಕ್ಷಣಿಕ ಯೋಜನೆಗಳು, ಪರೀಕ್ಷಾ ಫಲಿತಾಂಶ ಸುಧಾರಣೆಗೆ ಹಮ್ಮಿಕೊಂಡಿರುವ ವಿಶೇಷ ತರಗತಿಗಳು, ಮತ್ತು ಪೋಷಕರ ಜವಾಬ್ದಾರಿಯ ಬಗ್ಗೆ, ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಪೋಷಕರನ್ನು ನಾಲ್ಕು ಗುಂಪುಗಳನ್ನಾಗಿ ವಿಂಗಡಿಸಿ ಮುಂಬರುವ ವಾರ್ಷಿಕ ಪರೀಕ್ಷೆಗೆ ತಮ್ಮ ಮಕ್ಕಳಿಗೆ ತಾವೇ ಗುಂಪಿನಲ್ಲಿ ಚರ್ಚಿಸಿ ನಿರ್ಣಯಿಸಿದಂತೆ, ದೈನಂದಿನ ಓದು, ಸಮಯ ಪಾಲನೆ, ಶಿಕ್ಷಕರು ನೀಡಿದ ಮನೆಗೆಲಸ ಪೂರ್ಣಗೊಳಿಸಿದ ಬಗ್ಗೆ, ವಿಚಾರಣೆ, ಟಿ.ವಿ. ಮೊಬೈಲ್ ಬಳಸದಿರುವ ಬಗ್ಗೆ ಅರಿವು ಮೂಡಿಸಲಾಯಿತು.

ಪೋಷಕರು ತಮ್ಮ ಮಕ್ಕಳೊಂದಿಗೆ ಪ್ರತಿದಿನ ಕಲಿಕೆಗೆ ಸಂಬಂಧಿಸಿದ ಕನಿಷ್ಟ ಒಂದು ಗಂಟೆ ಜೊತೆಗಿದ್ದು ಸೂಕ್ತ ಸಲಹೆ ಸೂಚನೆ ನೀಡುವುದು, ಮಕ್ಕಳು ವಿಷಯ ಶಿಕ್ಷಕರ ಭೇಟಿಯ ಮೂಲಕ ಸೂಕ್ತ ಮಾರ್ಗದರ್ಶನ ಪಡೆಯುವ ಬಗ್ಗೆ ಪೋಷಕರೇ ತಮ್ಮ ಮಕ್ಕಳಿಗೆ, ಶಿಕ್ಷಕರಾಗಿ ಬೋಧನೆ

ಮಾಡಿದ್ದು ವಿಶೇಷವಾಗಿತ್ತು. ಶಾಲಾ ಶಿಕ್ಷಕ ವೃಂದ ಪ್ರತಿ ತಂಡದೊಂದಿಗಿದ್ದು ಸೂಕ್ತ ಸಲಹೆ ಸೂಚನೆ ನೀಡಿದರು.
ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಸುಧಾಕ‌ರ್, ಸಮಿತಿಯ ಸದಸ್ಯರಾದ ಧರಣೇಂದ್ರ ಜೈನ್‌, ಆನಂದ ಶೆಟ್ಟಿ, ಶ್ರೀಮತಿ ಪ್ರೇಮ, ಲಕ್ಷ್ಮಣ ನಾಯ್ಕ ಉಪಸ್ಥಿತರಿದ್ದರು. ಶಿಕ್ಷಕ ಶಿವಪುತ್ರ ಸುಣಗಾರ ಸ್ವಾಗತಿಸಿದರು, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಹಾಗೂ ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ಸುಜಯ್ ಬಿ. ವಂದಿಸಿದರು.

Related posts

ಕಣಿಯೂರು ಗ್ರಾಮದ ಪದ್ಮುಂಜ ಪ್ರೌಢ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಶಾಲಾ ಕ್ರೀಡಾ ಸಂಘದ ವತಿಯಿಂದ ರಾಷ್ಟ್ರೀಯ ಕ್ರೀಡೆ ದಿನಾಚರಣೆಯ

Suddi Udaya

ಉಜಿರೆ ಎಸ್‌ಡಿಎಂ ವಸತಿ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

Suddi Udaya

ಎಕ್ಸೆಲ್ ನಲ್ಲಿ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ರಾಜ್ಯೋತ್ಸವ ಆಚರಣೆ ಎಕ್ಸೆಲ್ ವಿದ್ಯಾಸಂಸ್ಥೆ ಸದಾ ಕನ್ನಡದ ಸೇವೆಗೆ ಸಿದ್ಧ: ಸುಮಂತ್ ಕುಮಾರ್ ಜೈನ್

Suddi Udaya
error: Content is protected !!