April 2, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ‌ಸವಾರ ಜಂಶಾದ್‌ ಎಂಬಾತನಿಗೆ ಗಂಭೀರ ಗಾಯ

ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ಸುಲ್ಕೇರಿ ಸೇತುವೆ ಬಳಿ ಬೈಕ್ ಸ್ಕಿಡ್ಆಗಿ ಸವಾರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಜ.14 ರಂದು ನಡೆದಿದೆ. ‌

ಸುಲ್ಕೇರಿ ಗ್ರಾಮದ ಸುಲ್ಕೇರಿ ಸೇತುವೆ ಬಳಿ ಬೈಕ್ ಕೆಎ 19 ಇಪಿ 6594 ನೇ ಬೈಕನ್ನು ಅದರ ಸವಾರ ಜಂಶಾದ್‌ ಎಂಬಾತನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಸವಾರನ ಚಾಲನಾ ಹತೋಟಿ ತಪ್ಪಿ ಬೈಕ್‌ ಸ್ಕಿಡ್‌ ಆಗಿ ರಸ್ತೆಗೆ ಬಿದ್ದಿದ್ದು , ಪರಿಣಾಮವಾಗಿ ಜಂಶಾದ್‌ ರವರ ತಲೆಗೆ ತೀವ್ರ ರಕ್ತ ಗಾಯವಾಗಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ಸಾವ್ಯ ಗ್ರಾಮದ ನಿವಾಸಿ ಹರೀಶ್‌ ಹೆಗ್ಡೆ ಹಾಗೂ ಅಲ್ಲಿ ಸೇರಿದ್ದ ಸಾರ್ವಜನಿಕರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ .ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 06/2024 ಕಲಂ: 279,338 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

Suddi Udaya

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

Suddi Udaya

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಮಾಲಾಡಿ: ಊರ್ಲ ರಸ್ತೆ ಕಾಂಕ್ರೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ, ಹತ್ತು ದಿನದೊಳಗೆ ಕಾಮಗಾರಿ ಪ್ರಾರಂಭ

Suddi Udaya
error: Content is protected !!