32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ‌ಸವಾರ ಜಂಶಾದ್‌ ಎಂಬಾತನಿಗೆ ಗಂಭೀರ ಗಾಯ

ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ಸುಲ್ಕೇರಿ ಸೇತುವೆ ಬಳಿ ಬೈಕ್ ಸ್ಕಿಡ್ಆಗಿ ಸವಾರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಜ.14 ರಂದು ನಡೆದಿದೆ. ‌

ಸುಲ್ಕೇರಿ ಗ್ರಾಮದ ಸುಲ್ಕೇರಿ ಸೇತುವೆ ಬಳಿ ಬೈಕ್ ಕೆಎ 19 ಇಪಿ 6594 ನೇ ಬೈಕನ್ನು ಅದರ ಸವಾರ ಜಂಶಾದ್‌ ಎಂಬಾತನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಸವಾರನ ಚಾಲನಾ ಹತೋಟಿ ತಪ್ಪಿ ಬೈಕ್‌ ಸ್ಕಿಡ್‌ ಆಗಿ ರಸ್ತೆಗೆ ಬಿದ್ದಿದ್ದು , ಪರಿಣಾಮವಾಗಿ ಜಂಶಾದ್‌ ರವರ ತಲೆಗೆ ತೀವ್ರ ರಕ್ತ ಗಾಯವಾಗಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ಸಾವ್ಯ ಗ್ರಾಮದ ನಿವಾಸಿ ಹರೀಶ್‌ ಹೆಗ್ಡೆ ಹಾಗೂ ಅಲ್ಲಿ ಸೇರಿದ್ದ ಸಾರ್ವಜನಿಕರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ .ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 06/2024 ಕಲಂ: 279,338 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಹಾಗೂ ವಿವಿಧ ಸಂಘಗಳ ಆಶ್ರಯದಲ್ಲಿ ಉಚಿತ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ

Suddi Udaya
error: Content is protected !!