September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ‌ಸವಾರ ಜಂಶಾದ್‌ ಎಂಬಾತನಿಗೆ ಗಂಭೀರ ಗಾಯ

ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ಸುಲ್ಕೇರಿ ಸೇತುವೆ ಬಳಿ ಬೈಕ್ ಸ್ಕಿಡ್ಆಗಿ ಸವಾರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಜ.14 ರಂದು ನಡೆದಿದೆ. ‌

ಸುಲ್ಕೇರಿ ಗ್ರಾಮದ ಸುಲ್ಕೇರಿ ಸೇತುವೆ ಬಳಿ ಬೈಕ್ ಕೆಎ 19 ಇಪಿ 6594 ನೇ ಬೈಕನ್ನು ಅದರ ಸವಾರ ಜಂಶಾದ್‌ ಎಂಬಾತನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಸವಾರನ ಚಾಲನಾ ಹತೋಟಿ ತಪ್ಪಿ ಬೈಕ್‌ ಸ್ಕಿಡ್‌ ಆಗಿ ರಸ್ತೆಗೆ ಬಿದ್ದಿದ್ದು , ಪರಿಣಾಮವಾಗಿ ಜಂಶಾದ್‌ ರವರ ತಲೆಗೆ ತೀವ್ರ ರಕ್ತ ಗಾಯವಾಗಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ಸಾವ್ಯ ಗ್ರಾಮದ ನಿವಾಸಿ ಹರೀಶ್‌ ಹೆಗ್ಡೆ ಹಾಗೂ ಅಲ್ಲಿ ಸೇರಿದ್ದ ಸಾರ್ವಜನಿಕರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ .ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 06/2024 ಕಲಂ: 279,338 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ಎಸ್.ಐ.ಟಿ ತನಿಖೆಯ ತಡೆಯಾಜ್ಞೆ ತೆರವು ಮಾಡಿದ ಹೈಕೋರ್ಟ್

Suddi Udaya

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಸಮಾರಂಭ

Suddi Udaya

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya
error: Content is protected !!