32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಸಾವಿರಾರು ಭಜಕರಿಂದ ಅಳದಂಗಡಿ ಅರಮನೆ ನಗರಿಯಲ್ಲಿ ಭಕ್ತಿಯ ಅಲೆ ಎಬ್ಬಿಸಿದ ಕುಣಿತಾ ಭಜನೆ

ಅಳದಂಗಡಿ : ಶ್ರೀ ಸೋಮನಾಥೇಶ್ವರೀ ಭಜನಾ ಮಂಡಳಿ, ಶ್ರೀ ಸತ್ಯದೇವತಾ ದೈವಸ್ಥಾನ ಅಳದಂಗಡಿ, ಸುರೇಶ್ ಪೂಜಾರಿ ಅಭಿಮಾನಿ ಬಳಗ ಸಹಕಾರದಲ್ಲಿ ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಜ. 14 ರಂದು ಭಜನಾ ಸತ್ಸಂಗ ರಾಮಕೃಷ್ಣ ಕಾಟುಕುಕ್ಕೆ ಸಂಗೀತಾ ಹಾಡಿನೊಂದಿಗೆ ಕುಣಿತ ಭಜನೆಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಎದುರು ಮೈದಾನದಲ್ಲಿ ನಡೆಯಿತು.

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದಲ್ಲಿ ದೀಪ ಪ್ರಜ್ವಲಿಸುವುದರೊಂದಿಗೆ ಮೈದಾನದಲ್ಲಿಕುಣಿತ ಭಜನೆಯ ಉದ್ಘಾಟನೆಯನ್ನು ಅಳದಂಗಡಿ ಶ್ರೀ ಕ್ಲಿನಿಕ್ ನ ವೈದ್ಯರಾದ ಡಾ.ಎನ್.ಎಂ ತುಳುಪುಳೆ ನೆರವೇರಿಸಿದರು.

ಧಾರ್ಮಿಕ ಸಮಾರಂಭದ ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ಮುಂಬಯಿ ಉದ್ಯಮಿ ಸುರೇಶ್ ಪೂಜಾರಿ ಮುಂಬಯಿ,ಗುಜರಾತ್ ಉದ್ಯಮಿ ಶೇಖರ ದೇವಾಡಿಗ ಪಾಲಬೆ,ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ,ಉಪಾಧ್ಯಕ್ಷ ಜನಾರ್ದನ ಪೂಜಾರಿ ಕೊಡಂಗೆ, ಅಳದಂಗಡಿ ಸಿ.ಎ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು, ಸದಾನಂದ ಆಚಾರ್ಯ ಸುಲ್ಕೇರಿಮೊಗ್ರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಳದಂಗಡಿ ಅರಮನೆಯ ಶ್ರೀ ಶಿವಪ್ರಸಾದ್ ಅಜಿಲರು, ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಹಾಗೂ ಸುಪ್ರೀತ್ ಜೈನ್, ಹರೀಶ್ ವೈ ಚಂದ್ರಮ ಕಾರ್ಯಕ್ರಮದ ನೃತೃತ್ವ ವಹಿಸಿದ್ದರು.ಆಮಂತ್ರಣ ಪರಿವಾರದ ಸಂಚಾಲಕ ವಿಜಯ್ ಕುಮಾರ್ ಜೈನ್ ಸ್ವಾಗತಿಸಿ,ವಂದಿಸಿದರು.

Related posts

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಬೆಳ್ತಂಗಡಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಉಜಿರೆ ಅನು ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಶುಭಾರಂಭ – ಭಗವಂತನ ಅನುಗ್ರಹದಿಂದ ಸಂಸ್ಥೆಯು ಪ್ರಗತಿ ಪಥದಲ್ಲಿ ಸಾಗಲಿ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya
error: Content is protected !!