September 6, 2026
Uncategorized

ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಸಾವಿರಾರು ಭಜಕರಿಂದ ಅಳದಂಗಡಿ ಅರಮನೆ ನಗರಿಯಲ್ಲಿ ಭಕ್ತಿಯ ಅಲೆ ಎಬ್ಬಿಸಿದ ಕುಣಿತಾ ಭಜನೆ

ಅಳದಂಗಡಿ : ಶ್ರೀ ಸೋಮನಾಥೇಶ್ವರೀ ಭಜನಾ ಮಂಡಳಿ, ಶ್ರೀ ಸತ್ಯದೇವತಾ ದೈವಸ್ಥಾನ ಅಳದಂಗಡಿ, ಸುರೇಶ್ ಪೂಜಾರಿ ಅಭಿಮಾನಿ ಬಳಗ ಸಹಕಾರದಲ್ಲಿ ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಜ. 14 ರಂದು ಭಜನಾ ಸತ್ಸಂಗ ರಾಮಕೃಷ್ಣ ಕಾಟುಕುಕ್ಕೆ ಸಂಗೀತಾ ಹಾಡಿನೊಂದಿಗೆ ಕುಣಿತ ಭಜನೆಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಎದುರು ಮೈದಾನದಲ್ಲಿ ನಡೆಯಿತು.

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದಲ್ಲಿ ದೀಪ ಪ್ರಜ್ವಲಿಸುವುದರೊಂದಿಗೆ ಮೈದಾನದಲ್ಲಿಕುಣಿತ ಭಜನೆಯ ಉದ್ಘಾಟನೆಯನ್ನು ಅಳದಂಗಡಿ ಶ್ರೀ ಕ್ಲಿನಿಕ್ ನ ವೈದ್ಯರಾದ ಡಾ.ಎನ್.ಎಂ ತುಳುಪುಳೆ ನೆರವೇರಿಸಿದರು.

ಧಾರ್ಮಿಕ ಸಮಾರಂಭದ ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ಮುಂಬಯಿ ಉದ್ಯಮಿ ಸುರೇಶ್ ಪೂಜಾರಿ ಮುಂಬಯಿ,ಗುಜರಾತ್ ಉದ್ಯಮಿ ಶೇಖರ ದೇವಾಡಿಗ ಪಾಲಬೆ,ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ,ಉಪಾಧ್ಯಕ್ಷ ಜನಾರ್ದನ ಪೂಜಾರಿ ಕೊಡಂಗೆ, ಅಳದಂಗಡಿ ಸಿ.ಎ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು, ಸದಾನಂದ ಆಚಾರ್ಯ ಸುಲ್ಕೇರಿಮೊಗ್ರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಳದಂಗಡಿ ಅರಮನೆಯ ಶ್ರೀ ಶಿವಪ್ರಸಾದ್ ಅಜಿಲರು, ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಹಾಗೂ ಸುಪ್ರೀತ್ ಜೈನ್, ಹರೀಶ್ ವೈ ಚಂದ್ರಮ ಕಾರ್ಯಕ್ರಮದ ನೃತೃತ್ವ ವಹಿಸಿದ್ದರು.ಆಮಂತ್ರಣ ಪರಿವಾರದ ಸಂಚಾಲಕ ವಿಜಯ್ ಕುಮಾರ್ ಜೈನ್ ಸ್ವಾಗತಿಸಿ,ವಂದಿಸಿದರು.

Related posts

ಮುಂಡಾಜೆ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ ನೂತನ ಡಿಸಿಯಾಗಿ ದರ್ಶನ್ ಹೆಚ್ ನೇಮಕ

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ದ ಕ ಜಿಲ್ಲಾ ಗೊಲ್ಲ (ಯಾದವ )ಸಂಘ ಬೆಳ್ತಂಗಡಿ ವಲಯದ ವತಿಯಿಂದ ಮನಿಷಾರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ನಗರ ನಿವಾಸಿ ದಿ| ನಾರಾಯಣ ರಾವ್ ಅವರ ಧರ್ಮಪತ್ನಿ ಶ್ರೀಮತಿ ಕೆ.ಸುಮಿತ್ರ ರಾವ್ ನಿಧನ

Suddi Udaya
error: Content is protected !!