25.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸರಕಾರಿ ಪ್ರೌಢಶಾಲೆ ನಡದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆ:ಪೋಷಕರೇ ತಮ್ಮ ಮಕ್ಕಳಿಗೆ ಶಿಕ್ಷಕರಾಗಿ ಬೋಧನೆ

ಬೆಳ್ತಂಗಡಿ : ಜ 14ರಂದು ಶುಕ್ರವಾರ ಎಸ್.ಎಸ್.ಎಲ್.ಸಿ ಪರೀಕ್ಷಾ ಪೂರ್ವ ಸಿದ್ಧತಾ ದೃಷ್ಟಿಯಿಂದ ಪೋಷಕರ ಸಭೆಯನ್ನು ಆಯೋಜಿಸಲಾಯಿತು. ಸಭೆಯಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಮೋಹನ ಬಾಬು ಡಿ. ಇವರು ಶಾಲಾ ವ್ಯವಸ್ಥೆಗಳು, ಶೈಕ್ಷಣಿಕ ಯೋಜನೆಗಳು, ಪರೀಕ್ಷಾ ಫಲಿತಾಂಶ ಸುಧಾರಣೆಗೆ ಹಮ್ಮಿಕೊಂಡಿರುವ ವಿಶೇಷ ತರಗತಿಗಳು, ಮತ್ತು ಪೋಷಕರ ಜವಾಬ್ದಾರಿಯ ಬಗ್ಗೆ, ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಪೋಷಕರನ್ನು ನಾಲ್ಕು ಗುಂಪುಗಳನ್ನಾಗಿ ವಿಂಗಡಿಸಿ ಮುಂಬರುವ ವಾರ್ಷಿಕ ಪರೀಕ್ಷೆಗೆ ತಮ್ಮ ಮಕ್ಕಳಿಗೆ ತಾವೇ ಗುಂಪಿನಲ್ಲಿ ಚರ್ಚಿಸಿ ನಿರ್ಣಯಿಸಿದಂತೆ, ದೈನಂದಿನ ಓದು, ಸಮಯ ಪಾಲನೆ, ಶಿಕ್ಷಕರು ನೀಡಿದ ಮನೆಗೆಲಸ ಪೂರ್ಣಗೊಳಿಸಿದ ಬಗ್ಗೆ, ವಿಚಾರಣೆ, ಟಿ.ವಿ. ಮೊಬೈಲ್ ಬಳಸದಿರುವ ಬಗ್ಗೆ ಅರಿವು ಮೂಡಿಸಲಾಯಿತು.

ಪೋಷಕರು ತಮ್ಮ ಮಕ್ಕಳೊಂದಿಗೆ ಪ್ರತಿದಿನ ಕಲಿಕೆಗೆ ಸಂಬಂಧಿಸಿದ ಕನಿಷ್ಟ ಒಂದು ಗಂಟೆ ಜೊತೆಗಿದ್ದು ಸೂಕ್ತ ಸಲಹೆ ಸೂಚನೆ ನೀಡುವುದು, ಮಕ್ಕಳು ವಿಷಯ ಶಿಕ್ಷಕರ ಭೇಟಿಯ ಮೂಲಕ ಸೂಕ್ತ ಮಾರ್ಗದರ್ಶನ ಪಡೆಯುವ ಬಗ್ಗೆ ಪೋಷಕರೇ ತಮ್ಮ ಮಕ್ಕಳಿಗೆ, ಶಿಕ್ಷಕರಾಗಿ ಬೋಧನೆ

ಮಾಡಿದ್ದು ವಿಶೇಷವಾಗಿತ್ತು. ಶಾಲಾ ಶಿಕ್ಷಕ ವೃಂದ ಪ್ರತಿ ತಂಡದೊಂದಿಗಿದ್ದು ಸೂಕ್ತ ಸಲಹೆ ಸೂಚನೆ ನೀಡಿದರು.
ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಸುಧಾಕ‌ರ್, ಸಮಿತಿಯ ಸದಸ್ಯರಾದ ಧರಣೇಂದ್ರ ಜೈನ್‌, ಆನಂದ ಶೆಟ್ಟಿ, ಶ್ರೀಮತಿ ಪ್ರೇಮ, ಲಕ್ಷ್ಮಣ ನಾಯ್ಕ ಉಪಸ್ಥಿತರಿದ್ದರು. ಶಿಕ್ಷಕ ಶಿವಪುತ್ರ ಸುಣಗಾರ ಸ್ವಾಗತಿಸಿದರು, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಹಾಗೂ ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ಸುಜಯ್ ಬಿ. ವಂದಿಸಿದರು.

Related posts

ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸೈಂಟ್‌ ಮೇರಿಸ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ- 2 ರ ಫಲಿತಾಂಶ : ವಾಣಿ ಪ.ಪೂ. ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ವಿಭಾ ಕೆ.ಆರ್ ರಾಜ್ಯಕ್ಕೆ 6ನೇ ಸ್ಥಾನ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ರೂ. 1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

Suddi Udaya
error: Content is protected !!