23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ‌ಸವಾರ ಜಂಶಾದ್‌ ಎಂಬಾತನಿಗೆ ಗಂಭೀರ ಗಾಯ

ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ಸುಲ್ಕೇರಿ ಸೇತುವೆ ಬಳಿ ಬೈಕ್ ಸ್ಕಿಡ್ಆಗಿ ಸವಾರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಜ.14 ರಂದು ನಡೆದಿದೆ. ‌

ಸುಲ್ಕೇರಿ ಗ್ರಾಮದ ಸುಲ್ಕೇರಿ ಸೇತುವೆ ಬಳಿ ಬೈಕ್ ಕೆಎ 19 ಇಪಿ 6594 ನೇ ಬೈಕನ್ನು ಅದರ ಸವಾರ ಜಂಶಾದ್‌ ಎಂಬಾತನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಸವಾರನ ಚಾಲನಾ ಹತೋಟಿ ತಪ್ಪಿ ಬೈಕ್‌ ಸ್ಕಿಡ್‌ ಆಗಿ ರಸ್ತೆಗೆ ಬಿದ್ದಿದ್ದು , ಪರಿಣಾಮವಾಗಿ ಜಂಶಾದ್‌ ರವರ ತಲೆಗೆ ತೀವ್ರ ರಕ್ತ ಗಾಯವಾಗಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ಸಾವ್ಯ ಗ್ರಾಮದ ನಿವಾಸಿ ಹರೀಶ್‌ ಹೆಗ್ಡೆ ಹಾಗೂ ಅಲ್ಲಿ ಸೇರಿದ್ದ ಸಾರ್ವಜನಿಕರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ .ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 06/2024 ಕಲಂ: 279,338 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಜಮಾಬಂದಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಬೆಳ್ತಂಗಡಿ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಲಾಯಿಲ: ಕೌಶಲ್ಯಾಭಿವೃದ್ಧಿ ಯೋಜನೆಯಡಿ ಸಾರಿಗೊಂಡೆ ತರಬೇತಿ ಸಮಾರೋಪ ಕಾರ್ಯಕ್ರಮ

Suddi Udaya

ಚಾರ್ಮಾಡಿ ಪ್ರದೇಶದಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಚಿರತೆಗಳು

Suddi Udaya
error: Content is protected !!