27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿ

ಮಕ್ಕಳ ಜೊತೆ ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತ್ಯು


ಸೋಣಂದೂರು: ಇಲ್ಲಿಯ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ಮಕ್ಕಳ ಜೊತೆ ಆಟವಾಡುತ್ತಿದ್ದ ಏಳು ವರ್ಷದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ದಾರುಣ ಘಟನೆ ಜ.15ರಂದು ಸಂಜೆ ನಡೆದಿದೆ.
ಪಣಕಜೆ ನಿವಾಸಿ ಮಹಮ್ಮದ ಹನೀಫ್ ಎಂಬವರ ದ್ವಿತೀಯ ಪುತ್ರ ಮಹಮ್ಮದ್ ಅನಾನ್ (೭ವ) ಈ ದುರ್ಘಟನೆಯಲ್ಲಿ ಮೃತಪಟ್ಟ ಬಾಲಕನಾಗಿದ್ದಾನೆ. ಇಂದು ಶಾಲೆಗೆ ರಜೆ ಇದ್ದ ಕಾರಣ ಪಕ್ಕದ ಮನೆಯ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದ. ಕಟ್ಟೆ ಇಲ್ಲದ ಬಾವಿಯ ಬಳಿ ಮಕ್ಕಳ ಆಟವಾಡುತ್ತಿದ್ದಾಗ ಬಾಲಕ ಅನಾನ್ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದನೆನ್ನಲಾಗಿದೆ. ಕೂಡಲೇ ಸ್ಥಳೀಯರ ಸಹಕಾರದಲ್ಲಿ ಬಾಲಕನನ್ನು ಮೇಲೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರೂ, ಆದಾಗಲೇ ಬಾಲಕ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈತ ಸ್ಥಳೀಯ ಶಾಲಾ ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಪುಂಜಾಲಕಟ್ಟೆ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಗುಂಡ್ಯ ಬಳಿ ಟ್ರಕ್ ಕಾರಿಗೆ – ಡಿಕ್ಕಿ ಗೇರುಕಟ್ಟೆ ಪರಿಸರದ ಐವರಿಗೆ ಗಾಯ:ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

Suddi Udaya

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

ಕಡಿರುದ್ಯಾವರ ಎಮಾ೯ಲ್ ಪಲ್ಕೆಯಲ್ಲಿ ಆಕಸ್ಮಿಕ ವಾಗಿ ಕೈಜಾರಿ ಬಾವಿಗೆ ಬಿದ್ದು ಮೃತಪಟ್ಟ ಬೆಳಗಾವಿ ನಿವಾಸಿ ಪ್ರವೀಣ್ ಎಂಬವರ ವಾರಿಸುದಾರರ ಪತ್ತೆಗೆ ಪೊಲೀಸರ ಮನವಿ

Suddi Udaya

ಪುಂಜಾಲಕಟ್ಟೆ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗೆ ಜೀವಾವಧಿ ಶಿಕ್ಷೆ

Suddi Udaya

ಮಿತ್ತಬಾಗಿಲು: ಕೊಳಂಬೆ ನಿವಾಸಿ ವಿದ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕುಂಟಾಲಪಳಿಕೆ ನಿವಾಸಿ ಹರೀಶ್ ಆಚಾರ್ಯರ ಶವ ಬಾವಿಯಲ್ಲಿ ಪತ್ತೆ:

Suddi Udaya
error: Content is protected !!