September 6, 2026
ಅಪರಾಧ ಸುದ್ದಿ

ಮಕ್ಕಳ ಜೊತೆ ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತ್ಯು


ಸೋಣಂದೂರು: ಇಲ್ಲಿಯ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ಮಕ್ಕಳ ಜೊತೆ ಆಟವಾಡುತ್ತಿದ್ದ ಏಳು ವರ್ಷದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ದಾರುಣ ಘಟನೆ ಜ.15ರಂದು ಸಂಜೆ ನಡೆದಿದೆ.
ಪಣಕಜೆ ನಿವಾಸಿ ಮಹಮ್ಮದ ಹನೀಫ್ ಎಂಬವರ ದ್ವಿತೀಯ ಪುತ್ರ ಮಹಮ್ಮದ್ ಅನಾನ್ (೭ವ) ಈ ದುರ್ಘಟನೆಯಲ್ಲಿ ಮೃತಪಟ್ಟ ಬಾಲಕನಾಗಿದ್ದಾನೆ. ಇಂದು ಶಾಲೆಗೆ ರಜೆ ಇದ್ದ ಕಾರಣ ಪಕ್ಕದ ಮನೆಯ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದ. ಕಟ್ಟೆ ಇಲ್ಲದ ಬಾವಿಯ ಬಳಿ ಮಕ್ಕಳ ಆಟವಾಡುತ್ತಿದ್ದಾಗ ಬಾಲಕ ಅನಾನ್ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದನೆನ್ನಲಾಗಿದೆ. ಕೂಡಲೇ ಸ್ಥಳೀಯರ ಸಹಕಾರದಲ್ಲಿ ಬಾಲಕನನ್ನು ಮೇಲೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರೂ, ಆದಾಗಲೇ ಬಾಲಕ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈತ ಸ್ಥಳೀಯ ಶಾಲಾ ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಪುಂಜಾಲಕಟ್ಟೆ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಅರಸಿನಮಕ್ಕಿ ಕಾನದಲ್ಲಿ ಬುಲೆಟ್ ಬೈಕ್‌ಗೆಇನೋವಾ ಕಾರು ಡಿಕ್ಕಿಬೈಕ್ ಸವಾರನಿಗೆ ತೀವ್ರ ಗಾಯ

Suddi Udaya

ಬೆಳ್ತಂಗಡಿ ಕಳ್ಳತನ ಪ್ರಕರಣ: ಬೆಳ್ತಂಗಡಿ ಪೊಲೀಸರಿಂದ ಅಂತರ್ ರಾಜ್ಯ ಕುಖ್ಯಾತ ಕಳ್ಳನ ಬಂಧನ

Suddi Udaya

ಬೆಳಾಲು: ಸ್ಕೂಟರ್‌ಗೆ ಕ್ರೇನ್ ಡಿಕ್ಕಿ ಹೊಡೆದು ಅಪಘಾತ-ಬಳಂಜ ಕಾಪಿನಡ್ಕ ನಿವಾಸಿ ಜಯ ಮೇಸ್ತ್ರೀ ಸ್ಥಳದಲ್ಲೇ ಸಾವು

Suddi Udaya

ಜೈನ ಧರ್ಮಕ್ಕೆ ಮತ್ತು ಜೈನ ಧರ್ಮೀಯರ ಭಾವನೆಗಳಿಗೆ ಅವಮಾನ ದೂರು : ಗಿರೀಶ್ ಮಟ್ಟಣ್ಣನವರ್ ಹಾಗೂ ಕುಡ್ಲ ರಾಂಪೇಜ್ ಮಾಲೀಕರು ಮೇಲೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಧರ್ಮಸ್ಥಳ ಮುಂಡ್ರುಪಾಡಿಯಲ್ಲಿ ಬೈಕಿಗೆ ಲಾರಿ ಡಿಕ್ಕಿ : ಬೈಕ್ ಸವಾರ ಬೆಳ್ತಂಗಡಿ ಖಾಸಗಿ ಸವೆ೯ಯರ್ ಸಹಾಯಕ ಗುರುವಾಯನಕೆರೆ ಶಕ್ತಿನಗರ ನಿವಾಸಿ ಪ್ರಸಾದ್ ಶೆಟ್ಟಿ ಮೃತ್ಯು: ಸಹ ಸವಾರ ಖಾಸಗಿ ಸವೆ೯ಯರ್ ವಿಶ್ವನಾಥ್ ರಾವ್ ಗೆ ಗಾಯ

Suddi Udaya
error: Content is protected !!